PSI ಹುದ್ದೆ ಹಗರಣದ ಪಿತಾಮಹ ಸಿಎಂ ಬೊಮ್ಮಾಯಿ ಎಂದ ಡಿಕೆಶಿ!

ಕುಣಿಗಲ್​: ಪಿಎಸ್​ಐ ಎಕ್ಸಾಂ ಅಕ್ರಮ ಪ್ರಕರಣದ ಮೂಲ ಕಿಂಗ್​ಪಿನ್​ನ ಹೆಸರೇಳಿದ್ರೆ ಇಡೀ ಸರ್ಕಾರವೇ ಉರುಳುತ್ತೆ. ಆ ಕಿಂಗ್​ಪಿನ್​ ಭವಿಷ್ಯದ ನಾಯಕ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದರು. ಈ ಮಾತು ಕೇಳಿ ಆ ಕಿಂಗ್​ಪಿನ್​ ಯಾರಿರಬಹುದು?

ಎಂಬ ತರೇಹವಾರಿ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮತ್ತೊಂದು ಬಾಂಬ್​ ಸಿಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಎಸ್​.ಬೊಮ್ಮಾಯಿ ಅವರೇ ಪಿಎಸ್​ಐ ಹಗಣದ ಪಿತಾಮಹ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪಿಎಸ್​ಐ ಹಗರಣದಲ್ಲಿ ಕಾಂಗ್ರೆಸ್​ನ ಶೇ.70 ನಾಯಕರು ಜೈಲಿಗೆ ಹೊಗಲಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷರ ಆರೋಪಕ್ಕೆ ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ ಹುಲಿಯೂರುದುರ್ಗದಲ್ಲಿ ಪ್ರತಿಕ್ರಿಯಿಸಿದ ಡಿಕೆಶಿ, ರಾಜ್ಯಾಧ್ಯಕ್ಷರು ನಮ್ಮನ್ನು ಜೈಲಿಗೆ ಕಳಿಸುವುದು ಇರಲಿ, ಅವರ ಪಕ್ಷದ ಮುಖಂಡರನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಯಾರನ್ನು ಬೇಕಾದರೂ ಜೈಲಿಗೆ ಕಳಿಸಲಿ, ನಮ್ಮ ಅಭ್ಯಂತರವಿಲ್ಲ, ಇದನ್ನು ಏನಾದರೂ ಮಾಡಿ ಕಾಂಗ್ರೆಸ್​ ಕಡೆ ತಿರುಗಿಸಬೇಕೆಂದು ಪ್ರಯತ್ನ ಮಾಡುತ್ತಿದ್ದಾರೆ. ಸಚಿವ ಅಶ್ವತ್ಥನಾರಾಯಣ್​ ಹೆಸರು ಹೊರಗಡೆ ಬಂದಿದೆ, ಗೃಹ ಸಚಿವರ ಕಚೇರಿಯಲ್ಲಿ ಹಗರಣ ನಡೆದಿದೆ, ಅನೇಕ ಸಚಿವರು ಇದರಲ್ಲಿ ಭಾಗಿಯಾಗಿದ್ದಾರೆ. ಇದನ್ನು ಯಾರೂ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಧು ಪೊಲೀಸ್ ಅಧಿಕಾರಿ- ವರ ಕುಖ್ಯಾತ ಖದೀಮ:

Mon May 9 , 2022
  ಅಸ್ಸಾಂ: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಭಾವಿ ಪತಿಯನ್ನು ಅರೆಸ್ಟ್ ಮಾಡಿ ಜೈಲಿಗೆ ಅಟ್ಟಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಹಣೆಮಣೆಗೆ ಏರಲು ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ತಮ್ಮ ಪತಿ ಭಾವಿ ಪತಿ ರಾಣಾ ಪೊಗಾಗ್ ಮಹಾ ವಂಚಕ ಎಂದು ತಿಳಿದುಬಂದಿದ್ದರಿಂದ ಪೊಲೀಸ್‌ ವಧು ಇಂಥದ್ದೊಂದು ದಿಟ್ಟ ಹೆಜ್ಜೆಯನ್ನು ಇಟ್ಟಿದ್ದು, ಎಲ್ಲರ ಶಹಬ್ಬಾಸ್‌ಗಿರಿ ಪಡೆದುಕೊಂಡಿದ್ದಾರೆ. ಅಸ್ಸಾಂನ ನಾಗೋನ್ ಸದರ್ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಜೋನ್ಮಣಿ ರಾಭಾ […]

Advertisement

Wordpress Social Share Plugin powered by Ultimatelysocial