ರಮ್ಯಾ ಟ್ವೀಟ್ ಗೆ ವ್ಯಂಗ್ಯವಾಗಿ ತಿರುಗೇಟು ನೀಡಿದ ಡಿ.ಕೆ.ಶಿವಕುಮಾರ್!

 

ಬೆಂಗಳೂರು: ನನ್ನನ್ನು ಟ್ರೋಲ್ ಮಾಡಲು ನೀವು ತೊಂದರೆ ತೆಗೆದುಕೊಳ್ಳಬೇಡಿ, ನನ್ನನ್ನು ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ನನ್ನ ವಿರುದ್ಧ ಟ್ರೋಲ್ ಮಾಡಲು ಸಂದೇಶ ನೀಡಿದ್ದಾರೆ ಎಂಬ ನಟಿ ರಮ್ಯಾ ಆರೋಪಕ್ಕೆ ತಿರುಗೇಟು ನೀಡಿರುವ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಾರ್ಯಾರಿಗೆ ಏನು ನೋವಿದೆಯೋ, ಏನು ದುಗುಡವಿದೆಯೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನನಗೆ ರಮ್ಯಾ ಟ್ವೀಟ್ ವಿಚಾರ ಗೊತ್ತಿಲ್ಲ. ಎಂ.ಬಿ.ಪಾಟೀಲ್, ರಮ್ಯಾ ಇಬ್ಬರೂ ನಮ್ಮ ಪಕ್ಷದವರೇ. ಅಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದೆ ಅಷ್ಟೇ. ಅದನ್ನು ಯಾಕೆ ಗೊಂದಲ ಮಾಡಿಕೊಂಡಿದ್ದಾರೆ ಗೊತ್ತಿಲ್ಲ ಎಂದರು.

ಇನ್ನು ಕೆ.ಪಿ.ಸಿ.ಸಿ ಕಚೇರಿಯಿಂದ ರಮ್ಯಾ ವಿರುದ್ಧ ಟ್ವೀಟ್ ವಿಚಾರಕ್ಕೆ ದಾಖಲೆಯೇನು ಎಂದು ಪ್ರಶ್ನಿಸಿರುವ ಡಿ.ಕೆ.ಶಿವಕುಮಾರ್, ನಮ್ಮ ಕಚೇರಿಯಿಂದ ಅಂತಹ ಯಾವುದೇ ಸಂದೇಶ ನೀಡಿಲ್ಲ. ಏನು ಮಿಸ್ ಫೈರ್ ಅಗಿದೆ ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆದುಕೊಳ್ಳುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಮನಗರ ಜಿಲ್ಲೆಯಲ್ಲಿ ಮೇ 13ರಿಂದ ಮೂರು ದಿನ ಮಾವು ಮೇಳ..!

Thu May 12 , 2022
ರಾಮನಗರ, ಮೇ 12: ನೈಸರ್ಗಿಕ ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ಒದಗಿಸಲು ಹಾಗೂ ಮಾವು ಬೆಳೆಗಾರರಿಗೆ ಉತ್ತಮ ಬೆಲೆ ದೊರೆಯುವಂತೆ ಮಾಡಲು ಜಿಲ್ಲೆಯಲ್ಲಿ ಮೂರು ದಿನದ ‘ಮಾವು ಪ್ರದರ್ಶನ ಮತ್ತು ಮಾರಾಟ ಮೇಳʼ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಇಕ್ರಮ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿರುವ ʼ’ರಾಮನಗರ ಮಾವು ಮೇಳ 2022’ʼದ ಬಗ್ಗೆ ಇಂದು ಇಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ […]

Advertisement

Wordpress Social Share Plugin powered by Ultimatelysocial