ರಮೇಶ್ ಜಾರಕಿಹೊಳಿ ದೆಹಲಿ ಟೂರ್ ಗೆ ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್

ಕೋಲಾರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ಕೇಸ್ ಸಿಬಿಐ ತನಿಖೆಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ಈ ವಿಚಾರವಾಗಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಅವರು ಯಾವ ತನಿಖೆ ಬೇಕಾದ್ರೂ ಮಾಡಲಿ ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಕೋಲಾರದ ಕುರುಡುಮಲೆ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜ್ಯಕ್ಕೆ ಎದುರಾಗಿರುವ ಎಲ್ಲಾ ವಿಘ್ನಗಳು ನಿವಾರಣೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ರಮೇಶ್ ಜಾರಕಿಹೊಳಿ ದೆಹಲಿ ಟೂರ್ ವಿಚಾರವಾಗಿ ಮಾತನಾಡಿದ ಅವರು, ನನ್ನ ಮೇಲೆ ಯಾವ ಪ್ರಯೋಗ ಬೇಕಾದರೂ ಮಾಡಲಿ ಎಲ್ಲವನ್ನು ಎದುರಿಸುತ್ತೇನೆ. ಸಿಬಿಐ ದಾಳಿಯನ್ನೂ ಎದುರಿಸಲು ಸಿದ್ಧನಾಗಿದ್ದೇನೆ. ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಟಾಂಗ್ ನೀಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆದಿಲ್​ಗೆ ಅಕ್ರಮ ಸಂಬಂಧವಿದೆ: ಮದ್ವೆಯಾದ ಕೆಲವೇ ದಿನಗಳಲ್ಲಿ ಪತಿ ವಿರುದ್ಧ ರಾಖಿ ಸಾವಂತ್​ ಗಂಭೀರ ಆರೋಪ

Fri Feb 3 , 2023
ನವದೆಹಲಿ: ಸಿನಿಮಾ ಲೋಕದ ಡ್ರಾಮಾ ಕ್ವೀನ್​ ಎಂದೇ ಖ್ಯಾತಿ ಪಡೆದಿರುವ ಹಾಗೂ ಸದಾ ವಿವಾದಗಳಿಂದಲೇ ಸುದ್ದಿಯಾಗುವ ಬಾಲಿವುಡ್​ ನಟಿ ರಾಖಿ ಸಾವಂತ್, ಇತ್ತೀಚೆಗಷ್ಟೇ ಮೈಸೂರು ಮೂಲದ ಆದಿಲ್​ ದುರ್ರಾನಿ ಎಂಬುವರನ್ನು ಮದುವೆಯಾಗಿದ್ದು, ಇದೀಗ ತನ್ನ ಪತಿಗೆ ವಿವಾಹೇತರ ಸಂಬಂಧ ಇದೆ ಎಂದು ಆರೋಪ ಮಾಡುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಫೆ. 2ರಂದು ಜಿಮ್​ಗೆ ತೆರಳುವಾಗ ಎದುರಾದ ಸುದ್ದಿಗಾರರೊಂದಿಗೆ ಮಾತನಾಡಿದ ರಾಖಿ ಸಾವಂತ್​, ಗಂಡ ಆದಿಲ್​ ದುರ್ರಾನಿ ಬಗ್ಗೆ ಮಾತನಾಡುತ್ತಾ ಕಣ್ಣೀರಾಕಿದರು. […]

Advertisement

Wordpress Social Share Plugin powered by Ultimatelysocial