200ಕ್ಕೂ ಹೆಚ್ಚು ಜನರಿಂದ ಬಾಂಗ್ಲಾದೇಶದ ಢಾಕಾದಲ್ಲಿ ಇಸ್ಕಾನ್ ರಾಧಾಕಾಂತ ದೇವಾಲಯ ಧ್ವಂಸ

 

ಬಾಂಗ್ಲಾದೇಶ: ಢಾಕಾದ ವಾರಿಯ 222 ಲಾಲ್ ಮೋಹನ್ ಸಹಾ ಬೀದಿಯಲ್ಲಿರುವ ಇಸ್ಕಾನ್ ರಾಧಾಕಾಂತ ದೇವಾಲಯದ ಮೇಲೆ 200ಕ್ಕೂ ಹೆಚ್ಚು ಜನರು ಗುರುವಾರ ದಾಳಿ ನಡೆಸಿ, ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೇ ಲೂಟಿ ಮಾಡಿರೋದಾಗಿ ತಿಳಿದು ಬಂದಿದೆ.ವರದಿಗಳ ಪ್ರಕಾರ, ಸುಮಂತ್ರ ಚಂದ್ರ ಶ್ರವಣ್, ನಿಹಾರ್ ಹಲ್ದಾರ್, ರಾಜೀವ್ ಭದ್ರಾ ಸೇರಿದಂತೆ ಅನೇಕ ಜನರು ದಾಳಿಯಲ್ಲಿ ಗಾಯಗೊಂಡಿದ್ದಾರೆ.ಈ ಗುಂಪಿನ ನೇತೃತ್ವವನ್ನು ಹಾಜಿ ಶಫಿವುಲ್ಲಾ ವಹಿಸಿದ್ದರು ಎಂದು ವರದಿಯಾಗಿದೆ.ಕಳೆದ ವರ್ಷವೂ ಇದೇ ದೇವಾಲಯದ ಮೇಲೆ ದಾಳಿ ನಡೆಸಲಾಗಿತ್ತು. ಆಗ ಕನಿಷ್ಠ ಮೂರು ಜನರು ಕೊಲ್ಲಲ್ಪಟ್ಟಿದ್ದರು.ಬಾಂಗ್ಲಾದೇಶದ ಕೊಮಿಲ್ಲಾ ಪಟ್ಟಣದ ನನುರ್ ದಿಘಿ ಸರೋವರದ ಬಳಿಯ ದುರ್ಗಾ ಪೂಜಾ ಪೆಂಡಾಲ್ ನಲ್ಲಿ ಕುರಾನ್ ಅನ್ನು ಅಪವಿತ್ರಗೊಳಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಡಿದ ನಂತರ ಹಿಂಸಾಚಾರ ಭುಗಿಲೆದ್ದ ನಂತ್ರ ಈ ಘಟನೆ ನಡೆದಿದೆ.ಈ ಹಿಂದೆ, ಢಾಕಾದ ಟಿಪ್ಪು ಸುಲ್ತಾನ್ ರಸ್ತೆ ಮತ್ತು ಚಿತ್ತಗಾಂಗ್ ನ ಕೊತ್ವಾಲಿಯಿಂದ ಇದೇ ರೀತಿಯ ಘಟನೆಗಳು ವರದಿಯಾಗಿದ್ದವು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತ-ಬಾಂಗ್ಲಾ ಗಡಿಯಲ್ಲಿ ಬಿಎಸ್ಎಫ್ 2.42 ಕೋಟಿ ಮೌಲ್ಯದ 40 ಚಿನ್ನದ ಬಿಸ್ಕೆಟ್ಗಳನ್ನು ವಶಪಡಿಸಿಕೊಂಡಿದೆ!

Fri Mar 18 , 2022
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುರುವಾರ 40 ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಂಡಿದೆ. ಬಿಎಸ್ ಎಫ್ ಬಿಡುಗಡೆ ಮಾಡಿರುವ ಹೇಳಿಕೆ ಪ್ರಕಾರ ವಶಪಡಿಸಿಕೊಂಡ ಚಿನ್ನದ ಬಿಸ್ಕತ್ ಗಳ ಒಟ್ಟು ತೂಕ 4.6 ಕೆ.ಜಿ ಆಗಿದ್ದು, ಇದರ ಬೆಲೆ 2.42 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಮಾರ್ಚ್ 17 ರಂದು ಬೆಳಿಗ್ಗೆ 7:45 ರ ಸುಮಾರಿಗೆ, ಬಾರ್ಡರ್ ಔಟ್ ಪೋಸ್ಟ್, 158 […]

Advertisement

Wordpress Social Share Plugin powered by Ultimatelysocial