‘ದಳಪತಿ’ ವಿಜಯ್ ಎದುರು ವಿಲನ್ ಆಗಲು ಅರ್ಜುನ್ ಸರ್ಜಾ ರೆಡಿಯಾಗಿದ್ದಾರೆ

ತಮಿಳು ನಟ ‘ದಳಪತಿ’ ವಿಜಯ್ ಅವರ ‘ವಾರಿಸು’ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಆ ಸಿನಿಮಾದ ನಂತರ ‘ವಿಕ್ರಮ್’ ನಿರ್ದೇಶಕ ಲೋಕೇಶ್‌ ಕನಕರಾಜ್ ಜೊತೆಗೆ ವಿಜಯ್ ಮತ್ತೊಂದು ಸಿನಿಮಾ ಮಾಡಲಿದ್ದಾರೆ. ಈ ಸಿನಿಮಾದ ಮೇಲೂ ಕೂಡ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ. ಜನವರಿಯಲ್ಲಿ ಈ ಸಿನಿಮಾದ ಶೂಟಿಂಗ್ ಆರಂಭವಾಗಲಿದ್ದು, ಸದ್ಯ ಈ ಚಿತ್ರದ ಕುರಿತಂತೆ ಒಂದಷ್ಟು ಆಸಕ್ತಿಕರ ಮಾಹಿತಿಗಳು ಹೊರಬಿದ್ದಿವೆ. ಹೌದು, ವಿಜಯ್ ನಟನೆಯ 67ನೇ ಸಿನಿಮಾದಲ್ಲಿ ನಟ ಅರ್ಜುನ್ ಸರ್ಜಾ ಅವರು ವಿಲನ್ ಪಾತ್ರ ಮಾಡಲಿದ್ದಾರೆ. ಅದಕ್ಕಾಗಿ ಅವರು ದುಬಾರಿ ಸಂಭಾವನೆ ಪಡೆಯಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.ವಿಜಯ್ ನಟನೆಯ ಈ ಹೊಸ ಸಿನಿಮಾದಲ್ಲಿ ಅರ್ಜುನ್ ಸರ್ಜಾ ಅವರು ಪ್ರಮುಖ ವಿಲನ್‌ಗಳಲ್ಲಿ ಒಬ್ಬರಾಗಿ ಕಾಣಿಸಿಕೊಳ್ಳಲಿದ್ದಾರೆ. ಆ ಪಾತ್ರಕ್ಕಾಗಿ ಅವರಿಗೆ ಬರೋಬ್ಬರಿ 5 ಕೋಟಿ ರೂ. ಸಂಭಾವನೆಯನ್ನು ನೀಡಲಾಗುತ್ತಿದೆಯಂತೆ. ಅಂದಹಾಗೆ, ಅರ್ಜುನ್ ಸರ್ಜಾ ಸೇರಿದಂತೆ ಒಟ್ಟು ಆರು ಮಂದಿ ವಿಲನ್‌ಗಳು ಈ ಸಿನಿಮಾದಲ್ಲಿ ಇರಲಿದ್ದಾರಂತೆ. ಅಂದಹಾಗೆ, ಈ ಹಿಂದೆಯೂ ಕೂಡ ಅರ್ಜುನ್ ಸರ್ಜಾ ಅವರು ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಇದೀಗ ಮೊದಲ ಬಾರಿಗೆ ವಿಜಯ್ ಎದುರು ಖಳರಾಗಿ ಅಬ್ಬರಿಸಲಿದ್ದಾರೆ.ಅರ್ಜುನ್ ಸರ್ಜಾ ಜೊತೆಗೆ ಬಾಲಿವುಡ್ ನಟ ಸಂಜಯ್ ದತ್ ಕೂಡ ಈ ಸಿನಿಮಾದಲ್ಲಿ ಮುಖ್ಯ ಖಳನ ಪಾತ್ರ ಮಾಡಲಿದ್ದಾರೆ. ಅವರಿಗೆ ಭರ್ತಿ 10 ಕೋಟಿ ರೂ. ಸಂಭಾವನೆ ನೀಡಲಾಗುತ್ತಿದೆಯಂತೆ. ಅವರ ಜೊತೆಗೆ ಗೌತಮ್ ವಾಸುದೇವ್‌ ಮೆನನ್, ಮಲಯಾಳಂ ನಟ ನಿವಿನ್ ಪೌಲಿ ಸೇರಿದಂತೆ ಇನ್ನೂ ಅನೇಕ ಮಂದಿ ಈ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ. ‘ದಳಪತಿ’ ವಿಜಯ್ ಎದುರು ನಾಯಕಿಯಾಗಿ ತ್ರಿಷಾ ಬಣ್ಣ ಹಚ್ಚುವ ಸಾಧ್ಯತೆ ಇದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ದಳಪತಿ ವಿಜಯ್, ರಶ್ಮಿಕಾ ಮಂದಣ್ಣ 'ವಾರಿಸು' ಆಡಿಯೋ ಲಾಂಚ್ ಟಿಕೆಟ್ ದರ ನೋಡಿ ದಂಗಗಾಗಿದ ಫ್ಯಾನ್ಸ್

Mon Dec 26 , 2022
ತಮಿಳು ಚಿತ್ರರಂಗದಲ್ಲಿ ದಳಪತಿ ವಿಜಯ್ ನಟನೆಯ ‘ವಾರಿಸು’ ಸಿನಿಮಾ  ಬಗ್ಗೆ ಭಾರೀ ನಿರೀಕ್ಷೆಯಿದೆ. ದೊಡ್ಡ ಮಟ್ಟದ ಅಭಿಮಾನಿ ಬಳಗ ಹೊಂದಿರುವ ದಳಪತಿ ವಿಜಯ್, ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ಈ ಚಿತ್ರದಲ್ಲಿ ಒಟ್ಟಿಗೆ ನಟಿಸಿರೋದರಿಂದ ನಿರೀಕ್ಷೆ ಹೆಚ್ಚಾಗಿದೆ. ಚಿತ್ರತಂಡವು ಡಿಸೆಂಬರ್ 24ರಂದು ‘ವಾರಿಸು’ ಆಡಿಯೋ ಲಾಂಚ್ ಕಾರ್ಯಕ್ರಮ ನಡೆಯಲಿದೆ ಎಂದು ಅಧಿಕೃತವಾಗಿ ಘೋಷಣೆ ಮಾಡಿತ್ತು. ಈಗ ಇದರ ಟಿಕೆಟ್ ಬಗ್ಗೆಯೇ ಚರ್ಚೆ ಶುರುವಾಗಿದೆ.ವಾರಿಸು’ ಸಿನಿಮಾದ ಆಡಿಯೋ ಲಾಂಚ್‌ನಲ್ಲಿ […]

Advertisement

Wordpress Social Share Plugin powered by Ultimatelysocial