ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67 ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನೆ

ಚೆನ್ನೈನಲ್ಲಿ ಅದ್ದೂರಿಯಾಗಿ ಮುಹೂರ್ತ ಮುಗಿಸಿದ ದಳಪತಿ 67
ಚಿತ್ರದ ಬಹುತೇಕ ತಾರಾಬಳಗದ ಸಮ್ಮುಖದಲ್ಲಿ ಚಿತ್ರಕ್ಕೆ ಚಾಲನ
ಚೆನ್ನೈ: ಇತ್ತೀಚೆಗಷ್ಟೇ ಸಿನಿಮಾ ಘೋಷಣೆ ಮಾಡಿದ್ದ ನಟ ದಳಪತಿ ವಿಜಯ್‌ ಮತ್ತು ನಿರ್ದೇಶಕ ಲೋಕೇಶ್‌ ಕನಗರಾಜ್‌, ಇದೀಗ ದಳಪತಿ 67 ಚಿತ್ರದ ಅದ್ದೂರಿ ಮುಹೂರ್ತವನ್ನೂ ನೆರವೇರಿಸಿಕೊಂಡಿದ್ದಾರೆ.
ಚೆನ್ನೈನಲ್ಲಿ ಫೆ. 2ರಂದು ನಡೆದ ಅದ್ದೂರಿ ಮುಹೂರ್ತದಲ್ಲಿ ಚಿತ್ರದ ಬಹುತೇಕ ಕಲಾವಿದರು, ತಂತ್ರಜ್ಞರು ಭಾಗವಹಿಸಿ ಮುಹೂರ್ತವನ್ನು ಸಂಪನ್ನಗೊಳಿಸಿದ್ದಾರೆ.
ಕಲಾವಿದರಾದ ತ್ರಿಷಾ ಕೃಷ್ಣನ್‌, ಅರ್ಜುನ್‌ ಸರ್ಜಾ, ಜಗದೀಶ್‌, ಪ್ರಿಯಾ ಆನಂದ್‌, ಮನ್ಸೂರ್‌ ಅಲಿ ಖಾನ್‌ ಸೇರಿದಂತೆ ಸಿನಿಮಾದ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರು ಮುಹೂರ್ತದಲ್ಲಿ ಹಾಜರಿದ್ದರು.
7 ಸ್ಕ್ರೀನ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಲಿರುವ ದಳಪತಿ 67 ಚಿತ್ರವನ್ನು ಲೋಕೇಶ್‌ ಕನಗರಾಜ್‌ ನಿರ್ದೇಶನ ಮಾಡುತ್ತಿದ್ದಾರೆ. ಮಾಸ್ಟರ್‌ ಸಿನಿಮಾ ಬಳಿಕ ವಿಜಯ್‌ ಜತೆಗಿದು ನಿರ್ದೇಶಕರ ಎರಡನೇ ಸಿನಿಮಾ ಆಗಿದೆ.
ಕೈದಿ, ಮಾಸ್ಟರ್‌ ಮತ್ತು ಬೀಸ್ಟ್‌ ಸಿನಿಮಾಗಳಿಗೆ ಸಂಗೀತ ನೀಡಿದ್ದ ರಾಕ್‌ಸ್ಟಾರ್‌ ಅನಿರುದ್ಧ ರವಿಚಂದ್ರನ್‌ ದಳಪತಿ 67ಕ್ಕೂ ಸಂಗೀತ ನೀಡಲಿದ್ದು, ನಾಲ್ಕನೇ ಬಾರಿ ವಿಜಯ್‌ ಜತೆ ಕೈ ಜೋಡಿಸಿದ್ದಾರೆ.
ಇನ್ನುಳಿದಂತೆ ಮನೋಜ್‌ ಪರಮಹಂಸ ಛಾಯಾಗ್ರಹಣ, ಅನ್ಬರವೀ ಸಾಹಸ, ಫಿಲೋಮಿನ್‌ ರಾಜ್‌ ಸಂಕಲನ, ಸತೀಸ್‌ ಕುಮಾರ್‌ ಕಲೆ, ದಿನೇಶ್‌ ನೃತ್ಯ ನಿರ್ದೇಶನ, ಸಂಭಾಷಣೆ ಲೋಕೇಶ್‌ ಕನಗರಾಜ್‌, ರತ್ನ ಕುಮಾರ್‌, ಧೀರಜ್‌ ವೈದ್ಯ, ರಾಮಕುಮಾರ್‌ ಬಾಲಸುಬ್ರಮಣ್ಯ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪೊಲೀಸಪ್ಪನ ಕಿವಿ ಕಚ್ಚಿದ ಕುಡುಕ!. ಮುಂದೇನಾಯ್ತು ನೋಡಿ!

Sat Feb 4 , 2023
ಕೇರಳ: ಕೇರಳದ ಕಾಸರಗೋಡಿನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿದ್ದಾಗ ವ್ಯಕ್ತಿಯೊಬ್ಬ ಪೊಲೀಸ್‌ ಅಧಿಕಾರಿಯೊಬ್ಬರ ಕಿವಿ ಕಚ್ಚಿದ ಘಟನೆ ನಡೆದಿದೆ. ಆರೋಪಿಯು ಮದ್ಯ ಕುಡಿದ ಸ್ಥಿತಿಯಲ್ಲಿದ್ದ ಸಂದರ್ಭದಲ್ಲಿ ಪೊಲೀಸರೊಬ್ಬರ ‘ಬಲ ಕಿವಿ’ ಕಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಸ್ಟ್ಯಾನಿ ರಾಡ್ರಿಕ್ಸ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನ ಅಪಘಾತದಲ್ಲಿ ಸಿಲುಕಿದ ರಾಡ್ರಿಕ್ಸ್‌ಗೆ ಪೊಲೀಸರು ಬೈದಿದ್ದಾರೆ. ಇದರಿಂದ ಕುಡಿದು ಫುಲ್‌ ಟೈಟ್‌ ಆಗಿದ್ದ ರಾಡ್ರಿಕ್ಸ್‌ ರಸ್ತೆಯಲ್ಲೇ ರಂಪಾಟ ಮಾಡಿದ್ದಾನೆ. ಇದರಿಂದ ಕೋಪಗೊಂಡ ಪೊಲೀಸ್ ತಂಡವು […]

Advertisement

Wordpress Social Share Plugin powered by Ultimatelysocial