ಧನಂಜಯ ಅವರ ಮುಂದಿನ ಚಿತ್ರಕ್ಕೆ ಶೀರ್ಷಿಕೆ ಅಂತಿಮ ಆಗಿದೆ. ಈ ಚಿತ್ರಕ್ಕೆ ‘ಹೊಯ್ಸಳ’ ಎಂದು ಹೆಸರಿಡಲಾಗಿದೆ. ಧನಂಜಯ ನಟನೆಯ ‘ರತ್ನನ್ ಪ್ರಪಂಚ’ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ರಿಲೀಸ್ ಆಗಿತ್ತು. ಈ ಚಿತ್ರವನ್ನು ಕೆ.ಆರ್.ಜಿ. ಸ್ಟುಡಿಯೋಸ್ ನಿರ್ಮಾಣ ಮಾಡಿತ್ತು. ಈಗ ‘ಹೊಯ್ಸಳ’ ಚಿತ್ರವನ್ನೂ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ.
ಹೊಯ್ಸಳ’ ಚಿತ್ರಕ್ಕೆ ಧನಂಜಯ ನಾಯಕ. ಈ ಚಿತ್ರ ಧನಂಜಯ ಅವರ 25ನೇ ಸಿನಿಮಾ ಅನ್ನೋದು ವಿಶೇಷ ವಾಗಿದೆ. ಈ ಚಿತ್ರದ ಬಹುತೇಕ ಶೂಟಿಂಗ್ ಬೆಳಗಾವಿ ಜಿಲ್ಲೆಯಲ್ಲಿ ನಡೆಯಲಿದೆ. ಪೊಲೀಸ್ ಕಥಾಹಂದರವನ್ನು ಇ ಸಿನೇಮಾ ಹೊಂದಿದೆ. ಏಪ್ರಿಲ್ ತಿಂಗಳಿನಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಚಿತ್ರದ ಕಲಾವಿದರ ಆಯ್ಕೆ ಪ್ರಗತಿಯಲ್ಲಿದೆ. ಮುಂಬರುವ ದಿನಗಳಲ್ಲಿ ಈ ಬಗ್ಗೆ ಘೋಷಣೆ ಆಗಲಿದೆ. ಕನ್ನಡ ರಾಜ್ಯೋತ್ಸವಕ್ಕೆ ಚಿತ್ರವನ್ನು ಬಿಡುಗಡೆ ಮಾಡುವ ಉದ್ದೇಶವನ್ನು ಚಿತ್ರತಂಡ ಇಟ್ಟುಕೊಂಡಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada