Davanagere :ತಡರಾತ್ರಿ ದಂಪತಿಯ ಭೀಕರ ಕೊಲೆ! ಬೆಚ್ಚಿಬಿದ್ದ ಸ್ಥಳೀಯರು .

ದಾವಣಗೆರೆ: ಎಲೆಬೇತೂರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧ ದಂಪತಿಯನ್ನು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.

ಗುರುಸಿದ್ದಯ್ಯ (80) ಮತ್ತು ಇವರ ಪತ್ನಿ ಸರೋಜಮ್ಮ (75) ಕೊಲೆಯಾದ ದಂಪತಿ.

ಗ್ರಾಮದ ಮನೆಯಲ್ಲಿ ಪತಿ‌-ಪತ್ನಿ ಇಬ್ಬರೇ ವಾಸವಿದ್ದರು. ಇವರಿಗೆ ಮೂವರು ಹೆಣ್ಣು ಮಕ್ಕಳಿದ್ದು, ಮದುವೆ ಮಾಡಿದ್ದರು.

ಸೋಮವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದಂಪತಿಯನ್ನು ಮಾಸಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಒಳಗೆ ಶವ ಬಿಟ್ಟು ಹೊರಗಿನಿಂದ ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಪಕ್ಕದ ಮನೆಯವರು ಸರೋಜಮ್ಮರನ್ನ ಭೇಟಿ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಪರಿಶೀಲನೆ ನಡೆಸಿದೆ. ಕೊಲೆಗಾರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇನ್ನು ದಂಪತಿ ಹತ್ಯೆ ಗ್ರಾಮಸ್ಥರಲ್ಲಿ ಭಯದ ವಾತಾವಾರಣ ಸೃಷ್ಟಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೆರಿಗೆ ಬಳಿಕ ಬೊಜ್ಜು ಕರಗಿಸಿಕೊಳ್ಳಬೇಕಾ.? ಇಲ್ಲಿದೆ ಪರಿಹಾರ

Tue Jan 25 , 2022
ಹೆರಿಗೆಯ ನಂತರ ಹೊಟ್ಟೆಯ ಬೊಜ್ಜು ಕರಗಿಸುವುದು ಸವಾಲಿನ ಕೆಲಸವೆನ್ನಬಹುದು. ಎಷ್ಟೇ ವ್ಯಾಯಾಮ ಮಾಡಿದರೂ ಇದು ಕರಗುವುದಿಲ್ಲ. ಇದಕ್ಕಾಗಿ ಇಲ್ಲಿದೆ ಸುಲಭವಾದ ಟಿಪ್ಸ್.ಅಗಸೆ ಬೀಜದಲ್ಲಿ ಜಾಸ್ತಿ ನಾರಿನ ಅಂಶ ಇರುತ್ತದೆ. ಇದು ಜೀರ್ಣ ಕ್ರಿಯೆಗೆ ಸಹಕಾರಿ.ದೇಹ ತೂಕವನ್ನು ಇಳಿಸಲು ಇದು ಬಹುಮುಖ್ಯ ಪಾತ್ರ ವಹಿಸುತ್ತದೆ. ಜೊತೆಗೆ ಮಲಬದ್ಧತೆಯನ್ನು ಇದು ತಡೆಯುತ್ತದೆ.ಪ್ರತಿನಿತ್ಯ ಇದನ್ನು ಬಳಸುವುದರಿಂದ ತ್ವಚೆ, ಕಾಂತಿ ಪಡೆದುಕೊಳ್ಳುತ್ತದೆ. ಚರ್ಮಕ್ಕೆ ತುಂಬಾ ಒಳ್ಳೆಯದು. ಎರಡು ಚಮಚ ಅಗಸೆ ಬೀಜಕ್ಕೆ ಎರಡು ಚಮಚ ಜೀರಿಗೆ […]

Advertisement

Wordpress Social Share Plugin powered by Ultimatelysocial