ನನ್ನ ಹುಟ್ಟು ಹಬ್ಬವನ್ನು ಈ ಬಾರಿಯೂ ಆಚರಿಸಿಕೊಳ್ಳುತ್ತಿಲ್ಲ ಅಭಿಮಾನಿಗಳು ಸಹಕರಿಸಬೇಕೆಂದು ಬೆಂಗಳೂರಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ ಮಾಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ ದರ್ಶನ್, ಹುಟ್ಟುಹಬ್ಬದ ಆಚರಣೆಯಿಂದ ದೂರವಿರುವುದು ಉತ್ತಮ ಎಂದು ನನಗೆ ಅನಿಸುತ್ತಿದೆ ಏಕೆಂದರೆ ಸಾಂಕ್ರಾಮಿಕ ರೋಗವು ಇನ್ನೂ ಇದೆ ಮತ್ತು ಪುನೀತ್ ರಾಜ್ಕುಮಾರ್ ಅವರ ನಿಧನದಿಂದಾಗಿ ಬೇಡ ಎಂದು ನಿರ್ಧರಿಸಿದ್ದೇನೆ.ನಿಮ್ಮೊಂದಿಗೆ ಇಲ್ಲದಿದ್ದಕ್ಕಾಗಿ ನಾನು ಎಲ್ಲರ ಬಳಿ ಕ್ಷಮೆಯಾಚಿಸುತ್ತೇನೆ. ಮುಂದಿನ ವರ್ಷ ಖಂಡಿತಾ ನನ್ನ ಹುಟ್ಟುಹಬ್ಬವನ್ನು ದೊಡ್ಡ ಮಟ್ಟದಲ್ಲಿ ಆಚರಿಸುತ್ತೇನೆ ಎಂದು ನಟ ದರ್ಶನ್ ಹೇಳಿದ್ದಾರೆ ̤
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada