ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಮೃತ್ಯು.

ಕಾಸರಗೋಡು: ಶಾಲಾ ಬಸ್ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಮಿಯಪದವಿನ ಸಮೀಪದ ಬಾಳಿಯೂರು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿರುವುದಾಗಿ ವರದಿಯಾಗಿದೆ.

ಮೃತಪಟ್ಟವರನ್ನು ಮಿಯಾಪದವು ದರ್ಬೆಯ ಹರೀಶ್ ಎಂಬವರ ಪುತ್ರ ಪ್ರೀತೇಶ್ ಶೆಟ್ಟಿ (20), ಬೆಜ್ಜಂಗಳದ ಸುರೇಶ್ ಎಂಬವರ ಪುತ್ರ ಅಭಿಷೇಕ್ ಎಂ. (20) ಎಂದು ತಿಳಿದುಬಂದಿದೆ.

ಇವರಿಬ್ಬರು ಮಂಗಳೂರು ಖಾಸಗಿ ಕಾಲೇಜೊಂದರ ಪದವಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳು ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ ಖಾಸಗಿ ಶಾಲೆಯ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ನಡೆದಿದೆ. ಮಂಜೇಶ್ವರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannadaz

Please follow and like us:

Leave a Reply

Your email address will not be published. Required fields are marked *

Next Post

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ.

Fri Jan 13 , 2023
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ ಮತ್ತು ಕೋಲಾರದಲ್ಲಿ 9 ಸಹಾಯಕ ವೈದ್ಯಕೀಯ ಅಧಿಕಾರಿ, ಕಾರ್ಯಕ್ರಮ ಸಹಾಯಕ, ಡ್ರೈವರ್‌ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರಿಂದ ಆಫ್‌ಲೈನ್‌ ಮೂಲಕ ಫೆ.೪ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ: ಈ ಹುದ್ದೆಗಳಿಗೆ ಬಿಎಎಂಎಸ್‌, ಎಂಬಿಬಿಎಸ್‌, ಪದವಿ ಮತ್ತು ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ: ಸಹಾಯಕ ವೈದ್ಯಕೀಯ ಅಧಿಕಾರಿ, ಕಾರ್ಯಕ್ರಮ ಸಹಾಯಕ, ಡ್ರೈವರ್‌ ಮತ್ತು ಇತರೆ […]

Advertisement

Wordpress Social Share Plugin powered by Ultimatelysocial