ಜಮ್ಮು ಮತ್ತು ಕಾಶ್ಮೀರದ ತಾವಿ ಸೇತುವೆಯಿಂದ ಉರುಳಿದ ಮಿನಿ ಬಸ್,

 

ಜಮ್ಮು: ಶುಕ್ರವಾರ ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರದ ತಾವಿ ಸೇತುವೆಯಿಂದ ಮಿನಿ ಬಸ್​ ಕೆಳಗೆ ಉರುಳಿದ ಹಿನ್ನೆಲೆಯಲ್ಲಿ ಭಾರೀ ಸಂಭವಿಸಿದೆ. ಮಿನಿ ಬಸ್​ ಸೇತುವೆಯಿಂದ ಕೆಳಗೆ ಬಿದ್ದುದರಿಂದ ಆ ವಾಹನದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೆಟಾಡೋರ್ ಸೇತುವೆಯ ಮೂಲಕ ಹಾದು ಹೋಗುತ್ತಿದ್ದಾಗ ಆಯತಪ್ಪಿ ಬಸ್ ಕೆಳಗೆ ಬಿದ್ದಿದೆ. ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ನಿನ್ನೆಯಷ್ಟೇ ಜಮ್ಮು ಕಾಶ್ಮೀರದ ಲಡಾಖ್​ನಲ್ಲಿ ಸೇನಾ ವಾಹನ ಶ್ಯೋಕ್ ನದಿಗೆ ಉರುಳಿದ ಪರಿಣಾಮ 7 ಮಂದಿ ಯೋಧರು ಸಾವನ್ನಪ್ಪಿದ್ದರು, ಹಲವು ಸೈನಿಕರು ಗಾಯಗೊಂಡಿದ್ದರು. ಅದರ ಬೆನ್ನಲ್ಲೇ ಅದೇ ದಿನ ರಾತ್ರಿ ಜಮ್ಮುವಿನಲ್ಲಿ ಈ ಘಟನೆ ನಡೆದಿದೆ. ಮಿನಿ ಬಸ್​ನಲ್ಲಿದ್ದವರ ಉಳಿದ ಪ್ರಯಾಣಿಕರ ಸ್ಥಿತಿ ಹೇಗಿದೆ? ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಶುಕ್ರವಾರ ಕಾಶ್ಮೀರದ ಲಡಾಖ್​ನಲ್ಲಿ 26 ಮಂದಿ ಸೈನಿಕರು ಸೇನಾ ವಾಹನದಲ್ಲಿ ಸಾಗುತ್ತಿದ್ದ ವೇಳೆ ಸ್ಕಿಡ್ ಆಗಿ ವಾಹನ ಶ್ಯೋಕ್ ನದಿಗೆ ಬಿದ್ದಿತ್ತು.

26 ಮಂದಿ ಸೈನಿಕರ ತಂಡವು ಪಾರ್ತಾಪುರದ ಟ್ರಾನ್ಸಿಟ್ ಕ್ಯಾಂಪ್‌ನಿಂದ ಉಪ ವಲಯದ ಹನೀಫ್‌ನ ಮುಂದಿನ ಸ್ಥಳಕ್ಕೆ ತೆರಳುತ್ತಿತ್ತು. ವಾಹನವು ರಸ್ತೆಯಿಂದ ಸ್ಕಿಡ್ ಆಗಿ ಶ್ಯೋಕ್ ನದಿಯಲ್ಲಿ ಬಿದ್ದಿತ್ತು. ಇದರ ಪರಿಣಾಮವಾಗಿ ಎಲ್ಲಾ ಪ್ರಯಾಣಿಕರಿಗೆ ಗಾಯಗಳಾಗಿತ್ತು ಎಂದು ಭಾರತೀಯ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಎಲ್ಲಾ 26 ಸೈನಿಕರನ್ನು ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೂ ಅವರಲ್ಲಿ ಏಳು ಮಂದಿ ಹುತಾತ್ಮರಾಗಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆರೋಗ್ಯ ಸಚಿವರಾಗಿದ್ದ ವಿಜಯ್ ಸಿಂಗ್ಲಾಗೆ 14 ದಿನ ನ್ಯಾಯಾಂಗ ಬಂಧನ

Sat May 28 , 2022
ಮೊಹಾಲಿ: ಪಂಜಾಬ್​ ಸರ್ಕಾರದ ಆರೋಗ್ಯ ಸಚಿವರಾಗಿದ್ದ ವಿಜಯ್ ಸಿಂಗ್ಲಾ 1 ಪರ್ಸೆಂಟ್ ಕಮಿಷನ್ ಪಡೆದಿದ್ದಾರೆ ಎಂಬುದಕ್ಕೆ ಸಾಕ್ಷಿಗಳು ದೊರೆತ ಹಿನ್ನೆಲೆಯಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ತಮ್ಮ ಸಂಪುಟದ ಸಚಿವ ವಿಜಯ್ ಸಿಂಗ್ಲಾ ಅವರನ್ನು ವಜಾಗೊಳಿಸಿದ್ದರು. ಅಲ್ಲದೆ, ಅವರನ್ನು ಬಂಧಿಸಲು ಸೂಚಿಸಿದ್ದರು. ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಪಂಜಾಬ್ ಮಾಜಿ ಸಚಿವ, ಆಪ್ ನಾಯಕ ವಿಜಯ್ ಸಿಂಗ್ಲಾಗೆ ಅವರಿಗೆ ಮೊಹಾಲಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವಿಜಯ್ ಸಿಂಗ್ಲಾ […]

Advertisement

Wordpress Social Share Plugin powered by Ultimatelysocial