ಉದೋಗ್ಯ ಖಾತ್ರಿ ಯೋಜನೆಯಡಿಯಲ್ಲಿ ಜೆನೆಗೂ ಕೆರೆ ಹೂಳೆತ್ತುವ ಕೆಲಸದಲ್ಲಿ ತೊಡಗಿದ್ದ ವೇಳೆ ಮಣ್ಣು ಕುಸಿದು ಬಿದ್ದು ಕೂಲಿ ಕಾರ್ಮಿಕ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಉಪನಾಯಕನಹಳ್ಳಿಯಲ್ಲಿ ನಡೆದಿದೆ. ಹಗನೂರು ಗ್ರಾಮದ ಈಡಿಗರ ನಿಂಗಪ್ಪ ಮೃತಪಟ್ಟ ವ್ಯಕ್ತಿ. ಗ್ರಾಮ ಪಂಚಾಯಿತಿ ಸಿಬ್ಬಂದಿ ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಲುಪಿಸಿದರು. ಚಿಕಿತ್ಸೆಗೆ ಸ್ಪಂದಿಸದೆ ನಿಂಗಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಮಿಕ ಮೃತಪಟ್ಟಿರುವುದು ನೋವಿನ ಸಂಗತಿ. ನೇರಗದಡಿ ಕಾರ್ಮಿಕನ ಕುಟುಂಬಕ್ಕೆ 75 ಸಾವಿರ ಪರಿಹಾರ ನೀಡಲಾಗುವುದು ಎಂದು ತಾ.ಪಂ. ಯು.ಹೆಚ್.ಸೋಮಶೇಖರ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ :ಸಿಂಹದ ಮರಿಯನ್ನು ದತ್ತು ಪಡೆದು ವಸಿಷ್ಠ ಸಿಂಹ