ಮಾಗಡಿಯ ಚಿಲುಮೆ ಮಠದ ಬಸವಲಿಂಗ ಶ್ರೀಗಳ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ವಾಮೀಜಿಯ ಅನುಮಾನಾಸ್ಪ ಸಾವು ಭಕ್ತರಲ್ಲಿ ಆತಂಕ ಮೂಡಿಸಿದೆ.ರಾಮನಗರ ಜಿಲ್ಲೆ ಮಾಗಡಿಯ ಸೋಲೂರು ಬಳಿಯಿರುವ ಚಿಲುಮೆ ಮಠದ ಆವರಣದಲ್ಲಿ ನೇಣು ಬಿಗಿದ ರೀತಿಯಲ್ಲಿ ಸ್ವಾಮೀಜಿ ಶವ ಪತ್ತೆಯಾಗಿದೆ.ಸ್ಥಳಕ್ಕೆ ವಿವಿಧ ಮಠದ ಶ್ರೀಗಳು ಆಗಮಿಸುತ್ತಿದ್ದಾರೆ.ರಾಮನಗರ ಜಿಲ್ಲೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada