ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಟೀಮ್ ಇಂಡಿಯಾದ ಬಹುತೇಕ ಆಟಗಾರರು ಕಳಪೆ ಪ್ರದರ್ಶನ ನೀಡಿದ್ದಾರೆ. ಬ್ಯಾಟಿಂಗ್ನಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಅಕ್ಷರ್ ಪಟೇಲ್ ಅವರ ಅಮೋಗ ಜೊತೆಯಾಟದಿಂದಾಗಿ ಟೀಮ್ ಇಂಡಿಯಾ ಅದ್ಭುತ ಹೋರಾಟವನ್ನು ನಡೆಸಿತಾದರೂ ತಂಡವಾಗಿ ಲಂಕಾ ವಿರುದ್ಧ ಶರಣಾಗಿದೆ.ಈ ಪಂದ್ಯದ ಸೋಲಿನ ಬಳಿಕ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಸೋಲಿಗೆ ಕಾರಣವಾದ ಪ್ರಮುಖ ಅಂಶವನ್ನು ಬೊಟ್ಟು ಮಾಡಿದ್ದಾರೆ. ಭಾರತ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲಿಯೂ ಪವರ್ಪ್ಲೇ ಅವಧಿಯಲ್ಲಿ ಕಳಪೆಯಾಗಿ ಆಡಿದ್ದು ಇದುವೇ ನಮಗೆ ಆಘಾತ ನೀಡತು ಎಂದಿದ್ದಾರೆ. ಅಲ್ಲದೆ ಕೆಲ ಮೂಲಭೂತ ತಪ್ಪುಗಳನ್ನು ನಾವು ಮಾಡಿದ್ದು ಈ ಹಂತದಲ್ಲಿ ಅಂಥಾ ತಪ್ಪುಗಳು ನಡೆಯಬಾರದು ಎಂದಿದ್ದಾರೆ. ಅರ್ಷ್ದೀಪ್ ಸಿಂಗ್ ಅವರ ನೋಬಾಲ್ ಉದ್ದೇಶಿಸಿ ಹಾರ್ದಿಕ್ ಪಾಂಡ್ಯ ಈ ಸಂದರ್ಭದಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.ನೋಬಾಲ್ ಎಸೆಯುವುದು ಅಪರಾಧ”ನಿಮಗೆ ಕೆಟ್ಟ ದಿನಗಳು ಇರಬಹುದು. ಆದರೆ ಮೂಲಭೂತ ಸಂಗತಿಗಳನ್ನು ನೀವು ಬಿಟ್ಟುಬಿಡಬಾರದು. ಇಂಥಾ ಹಂತದಲ್ಲಿ ಅದು ಬಹಳ ಕಠಿಣವಾಗುತ್ತದೆ” ಎಂದು ಅರ್ಶ್ದೀಪ್ ಸಿಂಗ್ ನೋ ಬಾಲ್ ಎಸೆದ ವಿಚಾರವಾಗಿ ಹಾರ್ದಿಕ್ ಪಾಂಡ್ಯ ಮಾತನಾಡಿದ್ದಾರೆ. ಮುಂದುವರಿದ ಹಾರ್ದಿಕ್ “ಈ ಹಿಂದೆ ಕೂಡ ಅವರು ನೋ ಬಾಲ್ಗಳನ್ನು ಎಸೆದಿದ್ದಾರೆ. ಇದು ಆರೋಪ ಮಾಡುವುದಲ್ಲ, ಆದರೆ ನೋ ಬಾಲ್ ಎಸೆಯುವುದು ದೊಡ್ಡ ಅಪರಾಧ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada