ಯಾವುದೇ ಚುನಾವಣೆಗಳು ನಡೆಯುವ ಮುನ್ನ ಪಕ್ಷಾಂತರ ಪರ್ವ ಆರಂಭವಾಗುತ್ತದೆ.

ಯಾವುದೇ ಚುನಾವಣೆಗಳು ನಡೆಯುವ ಮುನ್ನ ಪಕ್ಷಾಂತರ ಪರ್ವ ಆರಂಭವಾಗುತ್ತದೆ. ಈ ಹಿಂದಿನಿಂದಲೂ ಇದು ನಡೆದುಕೊಂಡು ಬಂದಿದ್ದು, ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಇದು ಈಗಾಗಲೇ ಶುರುವಾಗಿದೆ.

ಆದರೆ ಯಾವುದೇ ಒಂದು ಪಕ್ಷದಿಂದ ಆಯ್ಕೆಯಾದ ಶಾಸಕರು ಸ್ಥಾನ ಅನರ್ಹಗೊಳ್ಳುವ ಭೀತಿಯಿಂದ ಈಗಲೇ ಮತ್ತೊಂದು ಪಕ್ಷ ಸೇರ್ಪಡೆಗೊಳ್ಳಲು ಹಿಂಜರಿಯುತ್ತಾರೆ.

ಆದರೆ ತಮ್ಮ ಚಟುವಟಿಕೆಗಳ ಮೂಲಕ ತಾವು ಇರುವ ಹಾಲಿ ಪಕ್ಷವನ್ನು ತೊರೆಯುವ ಇಂಗಿತ ವ್ಯಕ್ತಪಡಿಸುತ್ತಿರುತ್ತಾರೆ.

ಇದೇ ರೀತಿ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಮುಂಬರುವ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಇದೀಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರೇ ಇದನ್ನು ದೃಢಪಡಿಸಿದ್ದಾರೆ.

ಶನಿವಾರದಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, ಅರಕಲಗೂಡು ಶಾಸಕ ಎ.ಟಿ. ರಾಮಸ್ವಾಮಿ ಹಾಗೂ ಅರಸಿಕೆರೆ ಶಾಸಕ ಶಿವಲಿಂಗೇಗೌಡ ಪಕ್ಷ ತೊರೆಯುವುದನ್ನು ಪರೋಕ್ಷವಾಗಿ ತಿಳಿಸಿದ್ದು, ಅರಕಲಗೂಡಿಗೆ ಮಾಜಿ ಸಚಿವ ಎ. ಮಂಜು ಅಭ್ಯರ್ಥಿಯಾಗಲಿದ್ದಾರೆ ಹಾಗೂ ಅರಸೀಕೆರೆ ಕ್ಷೇತ್ರಕ್ಕೂ ಈಗಾಗಲೇ ಪರ್ಯಾಯ ಅಭ್ಯರ್ಥಿಯನ್ನು ಹುಡುಕಲಾಗಿದೆ ಎಂದು ಹೇಳಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಾವು ಯಾವಾಗ ಬಂದೊದಗುತ್ತದೆ ಎಂಬುದನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ.

Sun Feb 5 , 2023
ತುಮಕೂರು: ಸಾವು ಯಾವಾಗ ಬಂದೊದಗುತ್ತದೆ ಎಂಬುದನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ. ಹೀಗಾಗಿ ಯಾವತ್ತಿಗೂ ಮರಣ ಎನ್ನುವುದು ಅನಿರೀಕ್ಷಿತ. ಇದೀಗ ಇಲ್ಲೊಬ್ಬ ವ್ಯಕ್ತಿ ಹುಟುಹಬ್ಬ ಆಚರಿಸಿಕೊಂಡ ಮರುದಿನ ಶವವಾಗಿ ಪತ್ತೆಯಾಗಿದ್ದಾನೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿನ್ನಪ್ಪನಹಳ್ಳಿಯ ನಿವಾಸಿ ಮಂಜುನಾಥ್ ಎಂಬಾತ ರಾತ್ರಿ ಸ್ನೇಹಿತರ ಜತೆಗೂಡಿ ಸಂಭ್ರಮದಿಂದ ತನ್ನ ಹುಟ್ಟುಹಬ್ಬವನ್ನು ಆಚರಿಸಿದ್ದಾನೆ. ಬಳಿಕೆ ಮನೆಗೆ ಬಂದು, ಮತ್ತೆ ಮನೆಯಿಂದ ಹೊರ ಹೋಗಿದ್ದಾನೆ. ಬೆಳಗ್ಗೆಯಾದರೂ ಹೊರ ಹೋಗಿದ್ದ ಮಂಜುನಾಥ್ ಇನ್ನೂ ಬಂದಿಲ್ಲವೆಂದು ಮನೆ ಮಂದಿ […]

Advertisement

Wordpress Social Share Plugin powered by Ultimatelysocial