ನವದೆಹಲಿ: ಗುರುವಾರ (ಫೆಬ್ರವರಿ 18) ತಡರಾತ್ರಿ ದೆಹಲಿ ಕ್ಯಾಂಟ್ ಪ್ರದೇಶದಲ್ಲಿ ಟ್ರಕ್ಗೆ ಅವರ ಮರ್ಸಿಡಿಸ್ ಕಾರು ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
ನಿನ್ನೆ ರಾತ್ರಿ 2.50 ರ ಸುಮಾರಿಗೆ ದೆಹಲಿ ಕ್ಯಾಂಟ್ ಪ್ರದೇಶದಲ್ಲಿ ಕರೆ ಬಂದಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಝೀ ನ್ಯೂಸ್ಗೆ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿದಾಗ ಸಂಪೂರ್ಣ ಕಾರು ಜಖಂಗೊಂಡಿರುವುದು ಗಮನಕ್ಕೆ ಬಂದಿದೆ. ಕಾರಿನಲ್ಲಿ ಸಿಲುಕಿದ್ದ ಐವರನ್ನು ಕಷ್ಟಪಟ್ಟು ಹೊರತೆಗೆಯಲಾಯಿತು. ಇಬ್ಬರು ಸಾವನ್ನಪ್ಪಿದ್ದರೆ, ಉಳಿದ 3 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ವಿನೋದ್ ಕುಮಾರ್ ಮತ್ತು ಕೃಷ್ಣ ಸೋಲಂಕಿ ಎಂದು ಗುರುತಿಸಲಾಗಿದೆ.
ಆರಂಭಿಕ ತನಿಖೆಯ ಪ್ರಕಾರ, ಮರ್ಸಿಡಿಸ್ ಕಾರು ಅತಿವೇಗದಿಂದ ಬಂದಿದ್ದರಿಂದ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯಾದ ಲಾರಿ ಪತ್ತೆಗೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಫರಿದಾಬಾದ್ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಹಿಂದಿರುಗಿದ ಪ್ರಯಾಣಿಕರು ತಮ್ಮ ಪಾಲಂ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada