ಉಡುಪಿ ಜಿಲ್ಲೆಯಲ್ಲಿ ಡೆಂಘೆ ಪ್ರಕರಣ ಹೆಚ್ಚಳ: ಜಡ್ಕಲ್-ಮುದೂರಲ್ಲಿ ಶಾಲೆಗೆ 10 ದಿನ ರಜೆ…

ಉಡುಪಿ: ಜಿಲ್ಲೆಯಲ್ಲಿ 136 ಡೆಂಘೆ ಪ್ರಕರಣ ದಾಖಲಾಗಿದ್ದು, ಜನರದಲ್ಲಿ ಆತಂಕ ಮೂಡಿಸಿದೆ. ಬೈಂದೂರು ತಾಲೂಕು ವ್ಯಾಪ್ತಿಯ ಜಡ್ಕಲ್ ಮುದೂರು ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ 10 ದಿನ ರಜೆ ಘೋಷಿಸಲಾಗಿದೆ.

ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 114 ಡೆಂಘೆ ಪ್ರಕರಣಗಳು ಪತ್ತೆಯಾಗಿದೆ.

ಈ ವ್ಯಾಪ್ತಿಯ ಮುದೂರು ಗ್ರಾಮದಲ್ಲಿ 105, ಜಡ್ಕಲ್​ನಲ್ಲಿ 7 ಪ್ರಕರಣ ಕಂಡು ಬಂದಿದೆ. ಕೊಲ್ಲೂರಿನಲ್ಲಿ ಇಬ್ಬರಿಗೆ ಡೆಂಘೆ ದೃಢಪಟ್ಟಿದೆ.

ಜಡ್ಕಲ್ ಮುದೂರು ಭಾಗದಲ್ಲಿ ನಿರಂತರವಾಗಿ ಡೆಂಘೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸ್ಥಳೀಯ ಶಾಸಕ ಸುಕುಮಾರ್ ಶೆಟ್ಟಿ ಮತ್ತು ಜಿಲ್ಲಾಧಿಕಾರಿ ಕೂರ್ಮರಾಮ್ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚಿಸಿದ ಬಳಿಕ ಮೇ 19ರಿಂದ 28ರವರೆಗೆ ರಜೆ ಘೋಷಿಸಲಾಗಿದೆ. ಈ ಭಾಗದ ಪ್ರತಿ ಮನೆಗೂ ಆರೋಗ್ಯ ಸಿಬ್ಬಂದಿ ಭೇಟಿ ನೀಡುತ್ತಿದ್ದು, ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಲು, ನೈರ್ಮಲ್ಯಕ್ಕೆ ಆದ್ಯತೆ ನೀಡುವಂತೆ ಅರಿವು ಮೂಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಸ್ಸಾಂನಲ್ಲಿ ಭಾರೀ ಮಳೆಗೆ 9 ಮಂದಿ ಬಲಿ, 6 ಲಕ್ಷಕ್ಕೂ ಹೆಚ್ಚು ಜನ ಅತಂತ್ರ...

Thu May 19 , 2022
  ಗುವಾಹಟಿ, ಮೇ 19- ಈಶಾನ್ಯ ರಾಜ್ಯ ಅಸ್ಸೋಂನಲ್ಲಿ ಹಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ವರುಣನ ರೌದ್ರಾವತಾರಕ್ಕೆ 9 ಮಂದಿ ಬಲಿಯಾಗಿದ್ದು, 6 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೀಡಾಗಿದ್ದಾರೆ. ವರುಣನ ಆರ್ಭಟದಿಂದ ಭೂ ಕುಸಿತ ಉಂಟಾಗಿ ಅನೇಕ ಕಡೆ ರಸ್ತೆ, ರೈಲು ಮಾರ್ಗಗಳಿಗೆ ತೀವ್ರ ತೊಂದರೆಯಾಗಿದೆ. ನಾಗೋನ್ ಜಿಲ್ಲೆಯಲ್ಲಿ 2.8 ಲಕ್ಷ ಮಂದಿ ಪ್ರವಾಹ ಹಾಗೂ ಮಳೆಯಿಂದ ಸಂತ್ರಸ್ತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ 135 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದು, 48 […]

Advertisement

Wordpress Social Share Plugin powered by Ultimatelysocial