ಗಾಂಜಾ, ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಜಯವಾಡದಿಂದ ಕಡಿಮೆ ಬೆಲೆಗೆ ಗಾಂಜಾ ತಂದು ಬೆಂಗಳೂರು ಮತ್ತು ಕೇರಳದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು.
ಕೇರಳ ಮೂಲದ ಮೊಹಮ್ಮದ್ ಸಾಕಿರ್ ಮತ್ತು ಕೃಷ್ಣ ಕುಮಾರ್ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಒಂದು ಲೀಟರ್ ವೀಡ್ ಆಯಿಲ್, 16 ಕೆಜಿ ಗಾಂಜಾ, ಒಂದು ವೋಲ್ಸ್ ವ್ಯಾಗನ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.