ಸೋನಿಯಾ ಗಾಂಧಿ ಜತೆ ದೇವೇಗೌಡ ಮಾತುಕತೆ:

ಬೆಂಗಳೂರು: ತಮ್ಮ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

ಇದರಿಂದ ರಾಜ್ಯಸಭಾ ಚುನಾವಣೆ ಈಗ ಮತ್ತೆ ಕುತೂಹಲ ಸೃಷ್ಟಿಸಿದೆ.

ಜೆಡಿಎಸ್ ಗೆ ಕೇವಲ ಹದಿಮೂರು ಸ್ಥಾನಗಳ ಅವಶ್ಯಕತೆ ಇರುವುದರಿಂದ ನಿಮ್ಮ ಹೆಚ್ಚುವರಿ ಮತವನ್ನು ತಮಗೆ ನೀಡುವಂತೆ ಜೆಡಿಎಸ್ ಮನವಿ ಮಾಡಿದೆ. ದೇವೇಗೌಡರ ಜತೆಗೆ ಮಾಜಿ ಸಿಎಂ ಕುಮಾರಸ್ವಾಮಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಜತೆ ಮಾತುಕತೆ ನಡೆಸಿದ್ದಾರೆ.

ಇಷ್ಟಾದ ಮೇಲೂ ಕಾಂಗ್ರೆಸ್ ಎರಡನೇ ಅಭ್ಯರ್ಥಿ ಹಾಜಿರುವುದರ ಉದ್ದೇಶ ಏನು ? ಎಂದು ಜೆಡಿಎಸ್ ನಾಯಕರು ಪ್ರಶ್ನಿಸಿದ್ದಾರೆ.

ಬಿಜೆಪಿ ಗೆಲ್ಲಿಸಬೇಕೆಂದು ಕಾಂಗ್ರೆಸ್ ಪಣತೊಟ್ಟಂತೆ ಕಾಣುತ್ತಿದೆ. ಸಿದ್ದರಾಮಯ್ಯ ಹಾಗೂ ಉಳಿದ ಕಾಂಗ್ರೆಸ್ ನಾಯಕರ ಮಧ್ಯೆ ಹೊಂದಾಣಿಕೆ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಟೀಕಿಸಿದ್ದಾರೆ.

ಹೆಚ್.ಡಿ ರೇವಣ್ಣ ಮಾತನಾಡಿ, ನಮ್ಮ ಬಳಿ 32 ಮತವಿದೆ. ಎರಡು ರಾಷ್ಟ್ರೀಯ ಪಕ್ಷಗಳಿವೆ. ಒಂದು ಕೋಮುವಾದಿ ಪಕ್ಷ, ಮತ್ತೊಂದು ಕೋಮುವಾದದ ವಿರುದ್ಧವಿರುವ ರಾಷ್ಟ್ರೀಯ ಪಕ್ಷ. ನಮ್ಮ ಅಭ್ಯರ್ಥಿ ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದ್ದೇವೆ. ನಮ್ಮ ಅಭ್ಯರ್ಥಿ ಬೆಂಬಲಿಸಲು ಸೋನಿಯಾಗಾಂಧಿ ಜೊತೆ ಚರ್ಚೆ ಮಾಡಿದ್ದೇವೆ. ಕುಪೇಂದ್ರ ರೆಡ್ಡಿ ಕೂಡ ಡಿಕೆಶಿ ಅವರನ್ನ ಭೇಟಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರನ್ಮ ಭೇಟಿ ಮಾಡಲು ಅವಕಾಶ ಕೇಳಿದ್ದೇವೆ. ಆದರೆ ನಿನ್ನೆ ಕಾಂಗ್ರೆಸ್ ದಿಢೀರಾಗಿ ತಮ್ಮ ಬಳಿ ಅಗತ್ಯ ಮತ ಇಲ್ಲದಿದ್ದರೂ ಎರಡನೇ ಅರ್ಜಿ ಹಾಕಿದ್ದಾರೆ ಎಂದರು.

ಶುಕ್ರವಾರವೇ ಸೋನಿಯಾ ಗಾಂಧಿ ಜೊತೆ ದೇವೇಗೌಡರು ಮಾತನಾಡಿದ್ದರು. ಜೆಡಿಎಸ್‌ ಮತವೇ ಬೇಡ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಾದೇಶಿಕ ಪಕ್ಷವನ್ನ ಬೆಂಬಲಿಸಿ, ಕೋಮುವಾದಿ ಪಕ್ಷವನ್ನು ದೂರ ಇಡಲು ಕಾಂಗ್ರೆಸ್ ನಮ್ಮನ್ನ ಬೆಂಬಲಿಸಬೇಕು ಎಂದು ಸೋನಿಯಾ, ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಅವರಿಗೂ ಮನವಿ ಮಾಡುತ್ತೇನೆ ಎಂದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗಂಗಾಮಾತೆಗೆ ಪೂಜೆ ಸಲ್ಲಿಸಿದ 'ಸಾಮ್ರಾಟ್ ಪೃಥ್ವಿರಾಜ್' ತಂಡ

Tue May 31 , 2022
  ಬಾಲಿವುಡ್ ತಾರೆ ಅಕ್ಷಯ್ ಕುಮಾರ್ ನೇತೃತ್ವದಲ್ಲಿ ಸಾಮ್ರಾಟ್ ಪೃಥ್ವಿರಾಜ್ ತಂಡ ವಾರಣಾಸಿಯಲ್ಲಿ ಗಂಗಾ ಪೂಜೆಯನ್ನು ನಡೆಸಿದ್ದು, ಪೂಜೆಯ ಚಿತ್ರಗಳು, ವಿಡಿಯೊ ವೈರಲ್ ಆಗಿವೆ. ಸಾಮ್ರಾಟ್ ಪೃಥ್ವಿರಾಜ್ ತಂಡವು ಚಿತ್ರ ಬಿಡುಗಡೆಗೆ ಮುನ್ನ ಪ್ರಚಾರಕ್ಕಾಗಿ ವಿವಿಧ ನಗರಗಳಿಗೆ ಭೇಟಿ ನೀಡುತ್ತಿದೆ. ಮೇ 30 ರಂದು ಅವರು ವಾರಣಾಸಿಗೆ ಭೇಟಿ ನೀಡಿದರು.‌ ಸಾಮ್ರಾಟ್ ಪೃಥ್ವಿರಾಜ್ ಧ್ವಜದೊಂದಿಗೆ ಗಂಗಾ ಪೂಜೆಯನ್ನು ಮಾಡಿದ್ದು ವಿಶೇಷವಾಗಿತ್ತು. ನಟ ಅಕ್ಷಯ್ ಕೂಡ ಪೂಜೆಗೆ ಮುನ್ನ ಗಂಗೆಯಲ್ಲಿ ಸ್ನಾನ […]

Advertisement

Wordpress Social Share Plugin powered by Ultimatelysocial