ಹಾಸನದ ವಿಧಾನಸಭೆ ಚುನಾವಣೆ ಟಿಕೆಟ್ ವಿಚಾರವಾಗಿ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯಮ್ಮ ಗ್ರಾಮದಲ್ಲಿಸಚಿವ ಹೆಚ್.ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯಮ್ಮ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಸಚಿವ ಹೆಚ್.ಡಿ ರೇವಣ್ಣ ಮಾತನಾಡಿ, ಮಾಜಿ ಪ್ರಧಾನಿ ಹೆಚ್.ಡಿ.
ದೇವೇಗೌಡರನ್ನು ಭೇಟಿಯಾಗಿ ಎಲ್ಲವನ್ನು ಚರ್ಚಿಸುತ್ತೇವೆ, ಅಂತಿಮ ತೀರ್ಮಾನವನ್ನು ದೇವೇಗೌಡರ ಕೈಗೊಳ್ಳುತ್ತಾರೆ. ಹೆಚ್,ಡಿ. ದೇವೇಗೌಡರ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿದ್ದೇವೆ. ಸಾಮಾನ್ಯ ಕಾರ್ಯಕರ್ತ ಯಾರು ಅಂತ ದೇವೇಗೌಡರಿಗೆ ಗೊತ್ತಿದೆ. ರಾಜಕೀಯದಲ್ಲಿ ದೇವೇಗೌಡರಿಗೆ 60 ವರ್ಷದ ಅನುಭವಿದೆ. ಹಾಸನದ ಜೆಡಿಎಸ್ ಟಿಕೆಟ್ನನ್ನು ಮಾಜಿ ಸಚಿವ ದೇವೇಗೌಡರು ಫೈನಲ್ ಮಾಡುತ್ತಾರೆ. ನಾನು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲಎಂದು ಹೇಳುವ ಮೂಲಕ ಪರೋಕ್ಷವಾಗಿ ಹೆಡ್ಡಿಕೆ ಟಾಂಗ್ ನೀಡಿದ್ದಾರೆ.
https://play.google.com/store/apps/details?id=com.speed.newskannada