ಯಲಬುರ್ಗಾ ವಿಧಾನಸಭಾ ಕ್ಷೇತ್ರದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದಿಂದ 30 ದಿನಗಳ ಕಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯ ಸಲವಾಗಿ ಅಭಿವೃದ್ಧಿ ಪರಿವರ್ತನಾ ಪಾದಯಾತ್ರೆ ಕೈಗೊಳ್ಳಲಾಗಿದೆ.ಸ್ವಾತಂತ್ರ್ಯ ಬಂದು 75 ವರ್ಷಗಳೆ ಕಳೆದರು ತಾಲೂಕು ಹಿಂದುಳಿದ ತಾಲ್ಲೂಕು ಹಣೆಪಟ್ಟಿ ಅಂಟಿಕೊಂಡಿದೆ ಇದರ ವಿರುದ್ಧ ಸಂಘಟಿತ ಹೊರಾಟ,ರೈತರ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ,ಪದವಿದರ ವಿದ್ಯಾರ್ಥಿಗಳ ನಿರುದ್ಯೋಗ ನಿವಾರಣೆಗೆ,ಬಡವರ ಪರವಾಗಿ ಕೆಲಸ ಮಾಡಲು ಈ ಬಾರಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಜನರು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ಬಿಟ್ಟು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ತಾಲೂಕಿನ ಅಧಿಕಾರ ಎನ್ ಸಿ ಪಿ ಗೆ ನೀಡಿದರೆ ಆ ಎಲ್ಲಾ ಸಮಸ್ಯೆಗಳನ್ನೂ ಪರಿಹರಿಸಲು ಅನೀರತ ಪರಿಶ್ರಮಿಸಲಾಗುವುದು ಎಂದು ಎನ್ ಸಿ ಪಿ ರಾಜ್ಯಾಧ್ಯಕ್ಷರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಆದ ಆರ್ ಹರೀಶ್ ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada