ಭೀಕರ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರ ಸಾವು

ಹುಣಸೂರು : ಹುಣಸೂರು ತಾಲೂಕಿನ ಮೈಸೂರು- ಹಾಸನ ಹೆದ್ದಾರಿಯ ಹೊಸರಾಮನಹಳ್ಳಿ ಬಳಿ ಕಾರು ಮತ್ತು ಟ್ರಕ್ ನಡುವೆ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಹುಣಸೂರು ತಾಲೂಕಿನ ಮೈಸೂರು- ಹಾಸನ ಹೆದ್ದಾರಿಯ ಹೊಸರಾಮನಹಳ್ಳಿ ಬಳಿ ಅವಘಡ ನಡೆಡಿದ್ದು, ವಿದ್ಯಾರ್ಥಿ ಗಳಾದ ಮೌಳೇಶ್ವರ ರೆಡ್ಡಿ ಹಾಗೂ ತೇಜಸ್ ಮೃತ ದುರ್ದೈವಿಗಳು . ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ 2ನೇ ವರ್ಷದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.ಮೌಳೇಶ್ವರ ರೆಡ್ಡಿ, ಸುಹಾನ್, ತೇಜಸ್ ಹಾಗೂ ಶುಭಂಕರ ಕಾರಿನಲ್ಲಿ ಮೈಸೂರಿನ ಕಡೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಮೌಳೇಶ್ವರ ರೆಡ್ಡಿ ತೀವ್ರಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ತೇಜಸ್ ಮೂಸೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.ಉಳಿದ ಇಬ್ಬರು ವಿದ್ಯಾರ್ಥಿಗಳು ಮೈಸೂರಿನ ಡಿ.ಆರ್.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮನೆಯ ಕಾಂಪೌಂಡ್ ಒಳಗೇ ವಯೋವೃದ್ಧೆಯ ಶವಸಂಸ್ಕಾರ, ಸ್ಥಳೀಯರಿಂದ ಆಕ್ರೋಶ

Wed Feb 2 , 2022
ಬೆಂಗಳೂರು: ಪುಟ್ಟೇನಹಳ್ಳಿಯ ಪಾಂಡುರಂಗ ನಗರದಲ್ಲಿ ಮೃತರಾದ ವಯೋವೃದ್ಧೆಯ ಶವ ಸಂಸ್ಕಾರವನ್ನು ಮನೆಯ ಕಾಂಪೌಂಡ್ ಒಳಗೆ ಮಾಡಿದ ವಿಚಿತ್ರ ಘಟನೆ ನಗರದಲ್ಲಿ ನಡೆದಿದ್ದು ಇದಕ್ಕೆ ಸ್ಥಳೀಯರಿಂದ ತೀವ್ರ ಆಕ್ರೋಶ ಎದುರಾಗಿದೆ.ನಗರದ ಪುಟ್ಟೇನಹಳ್ಳಿಯ ಪಾಂಡುರಂಗ ನಗರದಲ್ಲಿ ಮೃತರಾದ ವಯೋವೃದ್ಧೆಯನ್ನು ಕುಟುಂಬಸ್ಥರು ಅವರ ಮನೆಯ ಕಾಂಪೌಂಡ್ ಒಳಗೆ ಅಂತ್ಯ ಸಂಸ್ಕಾರ ಮಾಡಿದ್ದರಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಶವವನ್ನು ಹೊರತೆಗೆದು ಬೇರೆಡೆ ಹೂಳುವಂತೆ ಅಗ್ರಹಿಸಿದ್ದಾರೆ.ಸ್ಥಳೀಯರ ವಿರೋಧದ ನಡುವೆಯೂ ಕುಟುಂಬಸ್ಥರು ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಇದಕ್ಕೆ ಆಕ್ಷೇಪ […]

Advertisement

Wordpress Social Share Plugin powered by Ultimatelysocial