ರಾಗಿ  ಜೋಳ ಖರೀದಿ ಕೇಂದ್ರ ತೆರೆಯುವಂತೆ ಧರಣಿ ಸತ್ಯಾಗ್ರಹ-ರೈತರಿರಂದ ತಾಲ್ಲೂಕು ಕಚೇರಿ ಮುಂದೆ ಸತ್ಯಾಗ್ರಹ

ರಾಗಿ ಮತ್ತು ಜೋಳ ಖರೀದಿ ಕೇಂದ್ರವನ್ನು ದೊಡ್ಡಬಳ್ಳಾಪುರದಲ್ಲಿ ಬೆಂಬಲ ಬೆಲೆಯಲ್ಲಿ ಪ್ರಾರಂಭಿಸಬೇಕೆಂದು ಆಗ್ರಹಿಸಿ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮುಂದೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಘಟಕದ ವತಿಯಿಂದ ರೈತರು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.ನಗರದ ನೆಲದ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಿಂದ ಮೆರವಣಿಗೆ ಮೂಲಕ ಹೊರಟ ರೈತರು ತಾಲೂಕು ಕಚೇರಿ ಮುಂದೆ ಜೋಳದ ರಾಶಿಯನ್ನು ಸುರಿದು ನಿರಂತರ ಧರಣಿ ಸತ್ಯಾಗ್ರಹ ಮುಂದಾಗಿದ್ದಾರೆ.

ರೈತರು ಬೆಳೆದಿದ್ದ ಜೋಳ ಹಾಗೂ ರಾಗಿ ಉತ್ತಮವಾಗಿ ಫಸಲು ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ರೈತ ಬೆಳೆದ ಬೆಳೆಗಳಿಗೆ ಸೂಕ್ತವಾದ ಬೆಲೆಯಿಲ್ಲದಂತಾಗಿದೆ. ಹೀಗಾಗಿ ಸರ್ಕಾರವೇ ಘೋಷಣೆ ಮಾಡಿರುವ ಬೆಂಬಲ ಬೆಲೆಯನ್ನು ರೈತರಿಗೆ ಕೊಟ್ಟು ನೆರವಾಗಿ ರೈತರಿಂದ ಖರೀದಿ ಮಾಡಿ ರೈತರ ಬೆನ್ನಿಗೆ ನಿಲ್ಲಬೇಕು ಎಂದು ಆಗ್ರಹಿಸಿದರು.

 

Please follow and like us:

Leave a Reply

Your email address will not be published. Required fields are marked *

Next Post

ಆರೋಗ್ಯ ಸಹಾಯಕಿ ಮೇಲೆ ಮಾರಣಾಂತಿಕ ಹಲ್ಲೆ -ಬಾದಾಮಿಯ ಆರೋಗ್ಯ ಇಲಾಖೆಯಲ್ಲಿ ಘಟನೆ

Wed Oct 21 , 2020
ಕೋವಿಡ್ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಿಯ ಆರೋಗ್ಯ ಸಹಾಯಕಿ ಮೆಲೆ ಹಲ್ಲೆ ನಡೆಸಿರೋ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ಆರೋಗ್ಯ ಇಲಾಖೆಯ ಹೊಸಕೋಟೆ ಉಪಕೆಂದ್ರದಲ್ಲಿ ನಡೆದಿದೆ.ರಾಜೇಶ್ವರಿ ಮೇಲಿನಮನಿ ಆರೋಗ್ಯ ಸಹಾಯಕಿ ಹಲ್ಲೆಗೆ ಒಳಗಾಗಿದ್ದು.ಕೋವಿ ಡ್ ಟೆಸ್ಟ್ ಬಗ್ಗೆ ತಿಳಿಸಿ ಹೋಂ ಕ್ವರಂಟೈನ ಮಾಡಲು ಹೋದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಆರೋಗ್ಯ ಸಹಾಯಕಿ ಅಸ್ವಸ್ಥಗೊಂಡಿದ್ದು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ.ನಮ್ಮ ಸಿಬ್ಬಂದಿಗೆ ಏನಾದರೂ ಹೆಚ್ಚೂ ಕಡಿಮೆ ಆದರೆ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ […]

Advertisement

Wordpress Social Share Plugin powered by Ultimatelysocial