ರಾಗಿ ಮತ್ತು ಜೋಳ ಖರೀದಿ ಕೇಂದ್ರವನ್ನು ದೊಡ್ಡಬಳ್ಳಾಪುರದಲ್ಲಿ ಬೆಂಬಲ ಬೆಲೆಯಲ್ಲಿ ಪ್ರಾರಂಭಿಸಬೇಕೆಂದು ಆಗ್ರಹಿಸಿ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮುಂದೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಘಟಕದ ವತಿಯಿಂದ ರೈತರು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.ನಗರದ ನೆಲದ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಿಂದ ಮೆರವಣಿಗೆ ಮೂಲಕ ಹೊರಟ ರೈತರು ತಾಲೂಕು ಕಚೇರಿ ಮುಂದೆ ಜೋಳದ ರಾಶಿಯನ್ನು ಸುರಿದು ನಿರಂತರ ಧರಣಿ ಸತ್ಯಾಗ್ರಹ ಮುಂದಾಗಿದ್ದಾರೆ.
ರೈತರು ಬೆಳೆದಿದ್ದ ಜೋಳ ಹಾಗೂ ರಾಗಿ ಉತ್ತಮವಾಗಿ ಫಸಲು ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ರೈತ ಬೆಳೆದ ಬೆಳೆಗಳಿಗೆ ಸೂಕ್ತವಾದ ಬೆಲೆಯಿಲ್ಲದಂತಾಗಿದೆ. ಹೀಗಾಗಿ ಸರ್ಕಾರವೇ ಘೋಷಣೆ ಮಾಡಿರುವ ಬೆಂಬಲ ಬೆಲೆಯನ್ನು ರೈತರಿಗೆ ಕೊಟ್ಟು ನೆರವಾಗಿ ರೈತರಿಂದ ಖರೀದಿ ಮಾಡಿ ರೈತರ ಬೆನ್ನಿಗೆ ನಿಲ್ಲಬೇಕು ಎಂದು ಆಗ್ರಹಿಸಿದರು.