ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಕಳೆದ ನಾಲ್ಕು ದಿನಗಳ ಹಿಂದೆ ಬೆನ್ನು ನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ಚೇತರಿಸಿಕೊಂಡ ಅವರು ನಿನ್ನೆ ಡಿಸ್ಚಾರ್ಜ್ ಆಗಿದ್ದಾರೆ.
ಮೂಲಗಳ ಪ್ರಕಾರ, ಧರ್ಮೇಂದ್ರ ಅವರು ವ್ಯಾಯಾಮ ಮಾಡುತ್ತಿರುವಾಗ ಬೆನ್ನು ನೋವು ಕಾಣಿಸಿಕೊಂಡಿತ್ತು.
ಈ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ನೀಡಲಾಗಿದೆ ಎನ್ನಲಾಗಿದೆ.
ಇನ್ನೂ, ಈ ಬಗ್ಗೆ ಟ್ವೀಟ್ ಮಾಡಿ, ಸ್ನೇಹಿತರೇ ನಾನು ಹುಷಾರಾಗಿದ್ದೇನೆ. ಕಳೆದ ನಾಲ್ಕು ದಿನಗಳಿಂದ ಬೆನ್ನ ಹಿಂಭಾಗದಲ್ಲಿ ದೊಡ್ಡ ಸ್ನಾಯು ಎಳೆತದ ಕಾರಣ ನೋವನ್ನು ಅನುಭವಿಸಿದ್ದೇನೆ. ಹೀಗಾಗಿ ಆಸ್ಪತ್ರೆಗೆ ಭೇಟಿ ನೀಡಬೇಕಾಯಿತು. ನಾನು ನಿಮ್ಮ ಶುಭ ಹಾರೈಕೆ ಮತ್ತು ಆಶೀರ್ವಾದದೊಂದಿಗೆ ಹಿಂತಿರುಗಿದ್ದೇನೆ. ಆದ್ದರಿಂದ, ಚಿಂತಿಸಬೇಡಿ. ಈಗ ನಾನು ಬಹಳ ಎಚ್ಚರಿಕೆಯಿಂದ ಇರುತ್ತೇನೆʼ ಎಂದು ಹೇಳಿಕೊಂಡಿದ್ದಾರೆ.
ಭಾರತೀಯ ಚಿತ್ರರಂಗದ ದೊಡ್ಡ ತಾರೆಗಳಲ್ಲಿ ಒಬ್ಬರಾದ ಧರ್ಮೇಂದ್ರ, 1960 ರಲ್ಲಿ ಅರ್ಜುನ್ ಹಿಂಗೋರಾಣಿ ಅವರ ‘ದಿಲ್ ಭಿ ತೇರಾ ಹಮ್ ಭಿ ತೇರೆ’ ಯೊಂದಿಗೆ ಚಲನಚಿತ್ರಗಳಿಗೆ ಪ್ರವೇಶಿಸಿದರು.
ಕರಣ್ ಜೋಹರ್ ನಿರ್ದೇಶನದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದಲ್ಲಿ ಧರ್ಮೇಂದ್ರ ಅವರು ಜಯಾ ಬಚ್ಚನ್, ಶಬಾನಾ ಅಜ್ಮಿ, ಆಲಿಯಾ ಭಟ್ ಮತ್ತು ರಣವೀರ್ ಸಿಂಗ್ ಅವರೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada