ರಿಲಯನ್ಸ್ ಇಂಡಸ್ಟ್ರೀಸ್ ಸ್ಥಾಪಕ ಧೀರೂಭಾಯಿ ಅಂಬಾನಿ ಅವರ 90ನೇ ಜನ್ಮದಿನಾಚರಣೆ ಪ್ರಯುಕ್ತ ರಿಲಯನ್ಸ್ ಫೌಂಡೇಷನ್ 50,000 ಸ್ಕಾಲರ್ಶಿಪ್ಗಳನ್ನು ಪ್ರಕಟಿಸಿದೆ.ರಿಲಯನ್ಸ್ ಸಮೂಹದ ದಾನ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ನಿರ್ವಹಿಸುವ ರಿಲಯನ್ಸ್ ಫೌಂಡೇಷನ್, ಮುಂದಿನ ಹತ್ತು ವರ್ಷಗಳಲ್ಲಿ ಭಾರತದಲ್ಲಿ ಉನ್ನತ ಶಿಕ್ಷಣ ಮಾಡುವ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್ಗಳನ್ನು ಘೋಷಿಸಲಿದೆ.2022-23ರಲ್ಲಿ 5,000 ಪದವಿ ಪೂರ್ವ ಸ್ಕಾಲರ್ಶಿಪ್ಗಳನ್ನು ನೀಡಲಿದೆ. ಇದು 2 ಲಕ್ಷ ರೂ. ತನಕ ಸಿಗಲಿದೆ. 2023ರ ಫೆಬ್ರವರಿ 14ರ ತನಕ ಅರ್ಜಿ ಸಲ್ಲಿಸಬಹುದು ಎಂದು ಫೌಂಡೇಷನ್ ತಿಳಿಸಿದೆ.ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ನಿರ್ಧಾರ ತೆಗೆದುಕೊಳ್ಳಲು ಸಮುದಾಯ ನೀಡಿರುವ ಡೆಡ್ಲೈನ್ ಇಂದು ಮುಕ್ತಾಯಗೊಳ್ಳುತ್ತಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಏನು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬತ್ತ ಕುತೂಹಲ ಮೂಡಿದೆ.ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಬಳಿಕ ಮೀಸಲಾತಿ ಬಗ್ಗೆ ಸಿಎಂ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಸಂಜೆ ಐದಕ್ಕೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಡಿಸೆಂಬರ್ 29ಕ್ಕೆ 2ಎ ಮೀಸಲಾತಿ ಘೋಷಿಸುವ ಭರವಸೆಯನ್ನು ಸಿಎಂ ನೀಡಿದ್ದರು.ಡಿ.22ರಂದು ಪಂಚಮಸಾಲಿ ಸಮಾಜದಿಂದ ಪಂಚಲಕ್ಷ ವಿರಾಟ್ ಸಮಾವೇಶ ನಡೆದಿತ್ತು. ಸಮಾವೇಶದಲ್ಲಿ 2 ಲಕ್ಷಕ್ಕಿಂತ ಅಧಿಕ ಪಂಚಮಸಾಲಿ ಸಮುದಾಯದವರು ಪಾಲ್ಗೊಂಡಿದ್ದರು. ಅಂದು ಪಂಚಮಸಾಲಿ ಶಾಸಕರ ನಿಯೋಗಕ್ಕೆ ಸಿಎಂ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಸುವರ್ಣಸೌಧ ಮುತ್ತಿಗೆ ನಿರ್ಧಾರದಿಂದ ಸಮುದಾಯ ಹಿಂದೆ ಸರಿದಿತ್ತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…