ಚಿತ್ರ ನಿರ್ಮಾಣಕ್ಕೆ ಕಾಲಿಟ್ಟ ಧೋನಿ!

ಚೆನ್ನೈ:ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ಮಹೇಂದ್ರ ಸಿಂಗ್‌ ಧೋನಿ, ಚಿತ್ರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಸದ್ಯದಲ್ಲೇ ತಾವೊಂದು ತಮಿಳು ಚಿತ್ರವನ್ನು ನಿರ್ಮಿಸಲು ಸಿದ್ಧತೆ ಮಾಡಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಸೂಪರ್‌ಸ್ಟಾರ್‌ ರಜನೀಕಾಂತ್‌ರವರ ಆಪ್ತರಾದ ಸಂಜಯ್‌ ಎಂಬುವರನ್ನು ಚಿತ್ರದ ನಾಯಕನನ್ನಾಗಿ ಆರಿಸಲಾಗಿದ್ದು, ಖ್ಯಾತ ನಟಿ ನಯನತಾರಾ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.

ಈ ಬಾರಿಯ ಐಪಿಎಲ್‌ ಮುಗಿದ ಕೂಡಲೇ ಚಿತ್ರದ ಬಗ್ಗೆ ಅಧಿಕೃತ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತದೆ ಎಂದು ಧೋನಿ ತಿಳಿಸಿದ್ದಾರೆ.

ಈ ತಿಂಗಳ ಅಂತ್ಯಕ್ಕೆ ಐಪಿಎಲ್‌ ಪಂದ್ಯಾವಳಿ ಮುಗಿಯಲಿದ್ದು, ಅದರ ಬೆನ್ನಲ್ಲೇ ಚಿತ್ರದ ಶೂಟಿಂಗ್‌ ಶುರುವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್ ಜೀರೋ ಬ್ಯೂಟಿ ಶಿಲ್ಪಾ ಶೆಟ್ಟಿ

Fri May 13 , 2022
  ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್. ಸದಾ ಒಂದಲ್ಲ ಒಂದು ಪೋಸ್ಟ್ ಹಂಚಿಕೊಳ್ತಾ ಅಭಿಮಾನಿಗಳೊಟ್ಟಿಗೆ ಕನೆಕ್ಟ್ ಆಗುವ ಮಂಗಳೂರು ಬ್ಯೂಟಿ ಇನ್ಮುಂದೆ ನಿಮ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಿಗೋದೇ ಇಲ್ಲ. ಏಕಾಏಕಿ ಶಿಲ್ಪಾ ಶೆಟ್ಟಿ ಸೋಷಿಯಲ್ ಮೀಡಿಯಾದಿಂದ ಹೊರ ನಡೆದಿದ್ದಾರೆ. ಶಿಲ್ಪಾ ಈ ನಡೆಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಪತಿ ರಾಜ್ ಕುಂದ್ರಾ ನೀಲಿ ಚಿತ್ರಗಳ ನಿರ್ಮಾಣ ಪ್ರಕರಣದಡಿ ಬಂಧನವಾದ ಸಮಯದಲ್ಲೂ ಶಿಲ್ಪಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿದ್ದರು. ಯೋಗಾಸನದ […]

Advertisement

Wordpress Social Share Plugin powered by Ultimatelysocial