ಧ್ರುವನಾರಾಯಣ್ ಪಾರ್ಥಿವ ಶರೀರದ ಎದುರು ಪತ್ನಿ, ಮಕ್ಕಳು ಕಣ್ಣೀರು!

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್​.ಧ್ರುವನಾರಾಯಣ್ ಇನ್ನಿಲ್ಲ. ತೀವ್ರ ರಕ್ತಸ್ರಾವ ಉಂಟಾಗಿ ಮೈಸೂರಿನ ಡಿಆರ್​ಎಂಎಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.

ಇವರ ಅಂತ್ಯಕ್ರಿಯೆಯು ಚಾಮರಾಜನಗರದ ಹೆಗ್ಗವಾಡಿಯಲ್ಲಿ ನಾಳೆ ನಡೆಯಲಿದೆ.

ಹಳೇ ಮೈಸೂರು ಭಾಗದ ಪ್ರಬಲ ದಲಿತ ನಾಯಕರಾಗಿದ್ದ ಧ್ರುವನಾರಾಯಣ್ ಚಾಮರಾಜನಗರದ ಹೆಗ್ಗವಾಡಿ ಗ್ರಾಮದಲ್ಲಿ 1961 ಜುಲೈ 31ರಂದು ಜನಿಸಿದ್ದರು. ಧ್ರುವನಾರಾಯಣ್ ಅವರ ಮೂಲ ಹೆಸರು ರಂಗಸ್ವಾಮಿ ಧ್ರುವನಾರಾಯಣ್. ಆದರೆ ಜನರಿಗೆ ಆರ್​. ಧ್ರುವನಾರಾಯಣ್ ಎಂದೇ ಪರಿಚಿತರಾಗಿದ್ದರು.

ಧ್ರುವನಾರಾಯಣ್ ಪತ್ನಿ ವೀಣಾ, ಮಕ್ಕಳಾದ ದರ್ಶನ್, ಧೀರನ್ ಅವರನ್ನು ಅಗಲಿದ್ದಾರೆ. ದರ್ಶನ್, ವಕೀಲರಾಗಿದ್ದು, ಧೀರನ್, ಬಿಎಸ್ಸಿ ಮುಗಿಸಿ ಬ್ಯುಸಿನೆಸ್ ಮ್ಯಾನ್ ಆಗಿದ್ದಾರೆ. ಸದ್ಯ ಮೈಸೂರಿನಲ್ಲಿರುವ ನಿವಾಸಕ್ಕೆ ಧ್ರುವನಾರಾಯಣ್ ಅವರ ಪಾರ್ಥಿವ ಶರೀರವನ್ನು ತೆಗೆದುಕೊಂಡು ಬರಲಾಗಿದೆ. ಮೈಸೂರಿನಲ್ಲಿರುವ ನಿವಾಸಕ್ಕೆ ಸಾವಿರಾರು ಅಭಿಮಾನಿಗಳು ದೌಡಾಯಿಸಿದ್ದು, ಕಣ್ಣೀರಿನಲ್ಲಿ ಮುಳುಗಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಾಮರಾಜನಗರದ ಮಾಜಿ ಸಂಸದ ಆರ್​.ಧ್ರುವನಾರಾಯಣ್ ಇವತ್ತು ಬೆಳಗ್ಗೆ ವಿಧಿವಶರಾಗಿದ್ದಾರೆ.

Sat Mar 11 , 2023
ಚಾಮರಾಜನಗರದ ಮಾಜಿ ಸಂಸದ ಆರ್​.ಧ್ರುವನಾರಾಯಣ್ ಇವತ್ತು ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರ ಅಗಲಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಬೊಮ್ಮಾಯಿ , ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಅಂತಾ ಪ್ರಾರ್ಥಿಸುತ್ತೇನೆ ಎಂದಿದ್ದಾರೆ. […]

Advertisement

Wordpress Social Share Plugin powered by Ultimatelysocial