ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ಧ್ರುವನಾರಾಯಣ್ ಅವರ ಕೊಡುಗೆ ಅಪಾರ. ಒಂದು ವೋಟ್ ಧ್ರುವನಾರಾಯಣ್ ಅಂತ ನಿನ್ನೆ ನಾವು ಮಾತಾಡ್ತಿದ್ವಿ. ಅದು ಶಾಶ್ವತವಾಗಿ ಉಳಿಯಲಿಲ್ಲ. ಯಾರಿಗೂ ನಂಬೋದಕ್ಕೆ ಆಗ್ತಿಲ್ಲ. ಎಲ್ಲರ ಹೃದಯವನ್ನು ಗೆದ್ದಿದ್ದವರು ಧ್ರುವನಾರಾಯಣ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಂಬನಿ ಮಿಡಿದಿದ್ದಾರೆ.
ಮಾಜಿ ಸಂಸದ ಧ್ರುವನಾರಾಯಣ್ ನಿಧನಕ್ಕೆ ಸಂತಾಪ ಸೂಚಿಸಿದ ಡಿಕೆಶಿವಕುಮಾರ್, ಬ್ಲಡ್ ವಾಮಿಟ್ ಆಗಿ ಆಸ್ಪತ್ರೆಗೆ ಕರ್ಕೊಂಡು ಹೋಗ್ತಿದ್ದಾರೆ ಅಂತಾ ನಮ್ಮ ಮನೆಗೆ ಫೋನ್ ಮಾಡಿ ತಿಳಿಸಿದರು. ಸಾವಿಗೂ ಹುಟ್ಟಿಗೂ ನಡುವೆ ಒಂದು ಪುಟ್ಟ ಜೀವನವನ್ನ ಭಗವಂತ ಇಟ್ಟಿದ್ದ. ಇಡೀ ನಮ್ಮ ಕಾಂಗ್ರೆಸ್ ಪರಿವಾರಕ್ಕೆ ಅವರದ್ದು ಮೇರು ವ್ಯಕ್ತಿತ್ವ. ಯಾರನ್ನು ನೋಯಿಸಬಾರದು ಎಂಬ ವಿಶೇಷ ಗುಣ ಹೊಂದಿದ್ದ ನಾಯಕ ಎಂದು ಹೇಳಿದರು.
ಎಲ್ಲಾ ಸಮಾಜದವರು ಎಲ್ಲರನ್ನು ಪ್ರೀತಿಯಿಂದ ಕಾಣುತ್ತಿದ್ದ ವ್ಯಕ್ತಿ ಧ್ರುವನಾರಾಯಣ್. ನನಗೂ ಹತ್ತಾರು ಬಾರಿ ಸಮಾಧಾನ ಹೇಳಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ರು. ನನ್ನ ಕುಟುಂಬ ಹಾಗೂ ರಾಜ್ಯದ ಎಲ್ಲಾ ಕಾರ್ಯಕರ್ತರಿಗೆ ಆಸ್ತಿಯಾಗಿದ್ದರು. ಅವರ ಕ್ಷೇತ್ರದಲ್ಲಿ ಮಾಡಿದ್ದ ಕೆಲಸ ಸಾಕ್ಷಿಯಾಗಿ ಉಳಿದುಕೊಂಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ ಸೇರಿದಂತೆ ಎಲ್ಲರೂ ಕರೆ ಮಾಡಿದ್ರು. ಯಾರಿಗೂ ನಂಬೋದಕ್ಕೆ ಆಗ್ತಿಲ್ಲ. ಅವರು ಎಲ್ಲರ ಹೃದಯವನ್ನು ಗೆದ್ದಿದ್ದವರು. ಇಂದು ಅವರು ನಮ್ಮ ಜೊತೆ ಇಲ್ಲ ಎಂದ ಡಿಕೆ ಶಿವಕುಮಾರ್ ಕಣ್ಣೀರು ಹಾಕಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada