ಆರ್‌ಬಿಐನಿಂದ ಡಿಜಿಟಲ್ ಕರೆನ್ಸಿ ‘ಡಿಜಿಟಲ್ ರೂಪಾಯಿ’ ಜಾರಿ ̤

 

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿಂದು ಮಂಡಿಸಿದ 2022-23ನೇ ಸಾಲಿನ ಬಜೆಟ್ ನಲ್ಲಿ ‘ಡಿಜಿಟಲ್ ರೂಪಾಯಿ’ಯನ್ನು ಮಾರುಕಟ್ಟೆಗೆ ಪರಿಚಯಿಸುವ ಪ್ರಸ್ತಾಪ ಪ್ರಕಟಿಸಿದ್ದಾರೆ.2022-23ರಿಂದ ಅಂದರೆ ಪ್ರಸಕ್ತ ವರ್ಷದಿಂದಲೇ ಆರಂಭವಾಗುವಂತೆ ಭಾರತೀಯ ರಿಸರ್ವ್ ಬ್ಯಾಂಕ್, ಡಿಜಿಟಲ್ ರೂಪಾಯಿ ಅನ್ನು ಹಣಕಾಸು ಮಾರುಕಟ್ಟೆಗೆ ಪರಿಚಯಿಸಲಿದೆ.ಕೇಂದ್ರೀಯ ಬ್ಯಾಂಕ್‌ನ ಜಿಡಿಟಲ್ ಕರೆನ್ಸಿ(ಸಿಬಿಡಿಸಿ)ಯು ಡಿಜಿಟಲ್ ಆರ್ಥಿಕತೆಯನ್ನು ಹೆಚ್ಚಿಸಲಿದೆ. ಡಿಜಿಟಲ್ ಕರೆನ್ಸಿ ಹೆಚ್ಚು ಪರಿಣಾಮಕಾರಿ ಮತ್ತು ಅಗ್ಗದ ಕರೆನ್ಸಿ ನಿರ್ವಹಣಾ ವ್ಯವಸ್ಥೆಗೆ ಕಾರಣವಾಗುತ್ತದೆ. ಡಿಜಿಟಲ್ ಕರೆನ್ಸಿ ಬ್ಲಾಕ್ ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಲಿದೆ ಎಂದು ಸಚಿವರು ತಿಳಿಸಿದರು.ಡಿಜಿಟಲ್ ಬ್ಯಾಂಕಿಂಗ್:ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಡಿಜಿಟಲ್ ಬ್ಯಾಂಕಿಂಗ್, ಡಿಜಿಟಲ್ ಪಾವತಿ ವ್ಯವಸ್ಥೆ ಮತ್ತು ಹಣಕಾಸು ತಂತ್ರಜ್ಞಾನ ಆವಿಷ್ಕಾರಗಳು ತ್ವರಿತ ಗತಿಯಲ್ಲಿ ಬೆಳವಣಿಗೆ ಕಾಣುತ್ತಿವೆ. ಡಿಜಿಟಲ್ ಬ್ಯಾಂಕಿಂಗ್‌ ಪ್ರಯೋಜನಗಳು ದೇಶದ ಮೂಲೆ ಮೂಲೆಯನ್ನು ಗ್ರಾಹಕ ಸ್ನೇಹಿಯಾಗಿ ತಲುಪುವಂತೆ ನೋಡಿಕೊಳ್ಳಲು ಸರ್ಕಾರವು ನಿರಂತರವಾಗಿ ಈ ವಲಯಗಳನ್ನು ಪ್ರೋತ್ಸಾಹಿಸುತ್ತಿದೆ. ಈ ಕಾರ್ಯಸೂಚಿಯನ್ನು ಮುಂದಕ್ಕೆ ಕೊಂಡೊಯ್ಯಲಾಗುತ್ತಿದೆ.ನಾವು ಸ್ವಾತಂತ್ರ್ಯ ಗಳಿಸಿದ ಅಮೃತ ಮಹೋತ್ಸವ ಆಚರಿಸುತ್ತಿರುವ ಸುಸಂದರ್ಭದಲ್ಲಿ, ದೇಶದ 75 ಜಿಲ್ಲೆಗಳನ್ನು ಆಯ್ಕೆ ಮಾಡಿ, ಅಲ್ಲಿ ಶೆಡ್ಯೂಲ್ಡ್ ವಾಣಿಜ್ಯ ಬ್ಯಾಂಕ್‌ಗಳಿಂದ 75 ಡಿಜಿಟಲ್ ಬ್ಯಾಂಕಿಂಗ್ ಶಾಖೆಗಳನ್ನು (ಡಿಬಿಯು) ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಹಣಕಾಸು ಸಚಿವವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದರು.ಯಾವುದೇ ಸಮಯ – ಯಾವುದೇ ಸ್ಥಳದಲ್ಲಿ ಅಂಚೆ ಕಚೇರಿ ಉಳಿತಾಯ:ಮತ್ತೊಂದು ಪ್ರಮುಖ ಪ್ರಸ್ತಾವನೆ ಪ್ರಕಟಿಸಿರುವ ಹಣಕಾಸು ಸಚಿವರು, 2022ರಲ್ಲಿ ಅಂದರೆ ಇದೇ ವರ್ಷ ದೇಶದ 1.5 ಲಕ್ಷ ಅಂಚೆ ಕಚೇರಿಗಳಲ್ಲಿ 100% ಕೋರ್ ಬ್ಯಾಂಕಿಂಗ್ ವ್ಯವಸ್ಥೆ ರೂಪಿಸಲಾಗುವುದು. ಹಣಕಾಸಿನ ಸೇರ್ಪಡೆ, ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್, ಎಟಿಎಂಗಳ ಮೂಲಕ ಜನರ ಖಾತೆಗಳನ್ನು ಪ್ರವೇಶ ಸಕ್ರಿಯಗೊಳಿಸಲಾಗುತ್ತದೆ. ಪೋಸ್ಟ್ ಆಫೀಸ್ ಖಾತೆ ಮತ್ತು ಬ್ಯಾಂಕ್ ಖಾತೆ ನಡುವಿನ ಹಣ ಆನ್‌ಲೈನ್ ವರ್ಗಾವಣೆಯನ್ನು ಸಹ ಒದಗಿಸುತ್ತದೆ. ಇದು ವಿಶೇಷವಾಗಿ ಗ್ರಾಮೀಣ ಪ್ರದೇಶದ ರೈತರು ಮತ್ತು ಹಿರಿಯ ನಾಗರಿಕರಿಗೆ ಸಹಕಾರಿಯಾಗಲಿದೆ. ಪರಸ್ಪರ ಕಾರ್ಯಸಾಧ್ಯತೆ ಮತ್ತು ಹಣಕಾಸು ಸೇರ್ಪಡೆಯನ್ನು ಇದು ಸಕ್ರಿಯಗೊಳಿಸುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗ್ರಾಮೀಣ ಜನತೆಗೆ ಕೇಂದ್ರದಿಂದ ಗುಡ್ ನ್ಯೂಸ್: ಅನೇಕ ಯೋಜನೆ ಜಾರಿಗೆ ಕ್ರಮತರಲಾಗೆದೆ.

Wed Feb 2 , 2022
ನವದೆಹಲಿ: ದೇಶದ ಎಲ್ಲಾ ಗ್ರಾಮಗಳಲ್ಲಿ ಆಪ್ಟಿಕಲ್ ಫೈಬರ್ ಜಾಲ ನಿರ್ಮಿಸಿ ಇಂಟರ್ನೆಟ್ ವೇಗ ಹೆಚ್ಚಿಸಲು ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ.ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಗ್ರಾಮಗಳಿಗೆ OFC ಸಂಪರ್ಕ ಜಾಲ ನಿರ್ಮಿಸಿ ಇಂಟರ್ನೆಟ್ ವೇಗ ಹೆಚ್ಚಿಸಲು ಭಾರತ ಯೋಜನೆಯಡಿ ಇನ್ನಷ್ಟು ಸ್ಥಳಗಳನ್ನು ಆಯ್ಕೆ ಮಾಡಲಾಗುವುದು.ಈ ಮೂಲಕ ಗ್ರಾಮೀಣ ಪ್ರದೇಶಗಳನ್ನು ಮುಖ್ಯವಾಹಿನಿಗೆ ತರಲಾಗುತ್ತದೆ. ಮುಖ್ಯವಾಹಿನಿಯ ಸಂಪರ್ಕದಿಂದ ವಂಚಿತವಾದ ಗುಡ್ಡಗಾಡು ಪ್ರದೇಶಗಳಲ್ಲಿ ಅಳವಡಿಸಲಾಗುತ್ತದೆ. ಈ ಮೂಲಕ […]

Advertisement

Wordpress Social Share Plugin powered by Ultimatelysocial