ಗುಜರಾತ್ನಲ್ಲಿ ಬಿಜೆಪಿ ಗೆಲುವಿನ ಹಾದಿಯಲ್ಲಿದ್ದು, ಈ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಬೀರಲ್ಲ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾಕಂದ್ರೆ 2013 ರಲ್ಲಿ ಗುಜರಾತ್ನಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆಗ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಈಗಲೂ ಅಷ್ಟೇ ಗುಜರಾತ್ನಲ್ಲಿ ಬಿಜೆಪಿ ಗೆದ್ದ ಮಾತ್ರಕ್ಕೆ ಮುಂಬರುವ ನಮ್ಮ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬರುತ್ತೆ ಅನ್ನೋದು ಭ್ರಮೆ ಎಂದು ಗೆಲುವಿನ ಸಂಭ್ರಮದಲ್ಲಿರುವ ಬಿಜೆಪಿಗರಿಗೆ ಟಾಂಗ್ ನೀಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada