ಗೋವಾದಲ್ಲಿ ಗೋ ಮಾಂಸ ಸರಬರಾಜಿಗೆ ಟೆಂಡರ್ ಪಡೆದಿದ್ದಾರೆಯೆ?:ಸಿ.ಟಿ. ರವಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ

ಗೋಹತ್ಯೆ ನಿಷೇಧ ಸಮರ್ಥಿಸಿ ಮಾತಾಡುವ ಗೋವಾ ಉಸ್ತುವಾರಿ ಸಿ.ಟಿ. ರವಿಯವರು ಗೋವಾದಲ್ಲಿ ಗೋ ಮಾಂಸ ಸರಬರಾಜಿಗೆ ಟೆಂಡರ್ ಪಡೆದಿದ್ದಾರೆಯೆ? ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ನಾಯಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕದಂತೆ ಗೋವಾದಲ್ಲೂ ಗೋ ಹತ್ಯೆ ನಿಷೇಧ ಮಾಡಿಸುವ ಧೈರ್ಯ ಸಿ.ಟಿ. ರವಿಯವರಿಗೆ ಯಾಕಿಲ್ಲ?.

ಇಲ್ಲಿ ಪೂಜ್ಯನೀಯವಾದ ಗೋವು ಗೋವಾದಲ್ಲೇನು? ಎಂದು ಅವರು ಪ್ರಶ್ನಿಸಿದ್ದಾರೆ. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯ ಕುರಿತು ಬಿಜೆಪಿ ನಾಯಕರು ದ್ವಂದ್ವ ನಿಲುವು ಹಾಗೂ ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ ಎಂದು ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:  ಮತಗಟ್ಟೆ ಒಳಗೆ ಪ್ರವೇಶಿಸ್ತಿದ್ದ ವೇಳೆ ಪೊಲೀಸರ ಜತೆ ವಾಗ್ವಾದ-ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Please follow and like us:

Leave a Reply

Your email address will not be published. Required fields are marked *

Next Post

ದೇಶದಲ್ಲಿ ಐತಿಹಾಸಿಕ ಪ್ರತಿಭಟನೆಗಳು ನಡೆದಿವೆ-ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ

Wed Dec 23 , 2020
ತಿರುವನಂತಪುರದಲ್ಲಿ ನಡೆದ ಕೃಷಿ ವಿರೋಧಿ ಕಾನೂನುಗಳ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕೇರಳ ಸಿಎಂ ಪಿಣರಾಯಿ ವಿಜಯನ್, ಕೇಂದ್ರ ಸರ್ಕಾರ ರೈತರನ್ನು ಗೌರವಿಸುವುದಿಲ್ಲ ಎಂದು ಹೇಳಿದ್ದಾರೆ.‘ನಮ್ಮ ದೇಶದಲ್ಲಿ ಅನೇಕ ಐತಿಹಾಸಿಕ ಪ್ರತಿಭಟನೆಗಳು ನಡೆದಿದ್ದು, ರೈತರು ಪ್ರಮುಖ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಕೇರಳದಲ್ಲಿ ಯೂ ಇಂತಹ ಅನೇಕ ಪ್ರತಿಭಟನೆಗಳು ನಡೆದಿವೆ. ಭಾರತದಲ್ಲಿ ಈಗ ರೈತರ ಪ್ರತಿಭಟನೆ ನಡೆಯುತ್ತಿದೆ. ರೈತರು’ಅನ್ನದಾತ’ರಾಗಿದ್ದಾರೆ, ಕೇಂದ್ರದಲ್ಲಿರುವ ಈಗಿನ ಸರ್ಕಾರ ಅವರನ್ನು ಗೌರವಿಸುವುದಿಲ್ಲ’ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಎಂದು […]

Advertisement

Wordpress Social Share Plugin powered by Ultimatelysocial