ಬೆಳಗಾವಿ: ಕಮರ್ಷಿಯಲ್ ಪ್ರಾಕ್ಟೀಸ್ ಡಿಪ್ಲೊಮಾ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ( Rani Channamma University ) ನೇರವಾಗಿ ಬಿ.ಕಾಂ. 3ನೇ ಸೆಮಿಸ್ಟರಿಗೆ ಪ್ರವೇಶ ಪಡೆಯಲು ಇದ್ದ ಕಾಲಾವಕಾಶವನ್ನು ಡಿ.23ರವರೆಗೆ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.
ಅಶ್ವತ್ಥನಾರಾಯಣ ( Minister Dr CN Ashwathnarayan ) ತಿಳಿಸಿದ್ದಾರೆ.
ಈ ಬಗ್ಗೆ ಸೋಮವಾರ ಇಲ್ಲಿ ಮಾತನಾಡಿದ ಅವರು, ಈ ಹಿಂದಿನ ಸೂಚನೆಯಂತೆ ಕಡ್ಡಾಯ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡು ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶ ಕೊಡಬಹುದು. ರಾಣಿ ಚೆನ್ನಮ್ಮ ವಿವಿ ವ್ಯಾಪ್ತಿಗೆ ಬರುವ ಕಾಲೇಜುಗಳು ಇಂತಹ ವಿದ್ಯಾರ್ಥಿಗಳ ಪಟ್ಟಿಯನ್ನು ನಂತರ ವಿಶ್ವವಿದ್ಯಾಲಯಕ್ಕೆ ಕಳಿಸಿಕೊಡಬೇಕು. ಬಳಿಕ ಇಂತಹ ಪ್ರವೇಶಗಳಿಗೆ ಅನುಮೋದನೆ ಕೊಡಲಾಗುವುದು ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada