ಖ್ಯಾತ ನಿರ್ಮಾಪಕ ಹರ್ಷವರ್ಧನ್ ಅರೆಸ್ಟ್

ನಟಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ವಿಷನ್-2023’ ಸಿನಿಮಾ ನಾಯಕ ಕಮ್ ನಿರ್ಮಾಪಕ ಹರ್ಷವರ್ಧನ್ ಅಲಿಯಾಸ್ ವಿಜಯ ಭಾರ್ಗವನನ್ನು ಪೊಲೀಸರು ಬಂಧಿಸಿದ್ದಾರೆ.ಸಿನಿಮಾದಲ್ಲಿ ಸಹನಟಿಯಾಗಿ ಅಭಿನಯಿಸುತ್ತಿದ್ದ ನಟಿಗೆ ಹರ್ಷವರ್ಧನ್ ಪ್ರೀತಿ-ಪ್ರೇಮದ ನಾಟಕವಾಡಿ, ನಿನ್ನನ್ನೇ ಮದುವೆಯಾಗುವುದಾಗಿ ಹೇಳಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.ಸಂತ್ರಸ್ತ ನಟಿ ನೀಡಿದ ದೂರಿನ ಮೇರೆಗೆ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ನಿರ್ಮಾಪಕ ಹರ್ಷವರ್ಧನ್ ನನ್ನು ಬಂಧಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.ತನ್ನನ್ನು ಮದುವೆಯಾಗುವುದಾಗಿ ಹೇಳಿ ನಂಬಿಸಿ ಕಳೆದ 2 ವರ್ಷಗಳಿಂದ ದೈಹಿಕವಾಗಿ ಬಳಸಿಕೊಳ್ಳುತ್ತಿದ್ದಾನೆ. ಇದೀಗ ಮದುವೆ ಬಗ್ಗೆ ಮಾತನಾಡಿದರೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆಯೊಡ್ಡುತ್ತಿದ್ದಾನೆ ಎಂದು ನಟಿ ದೂರು ನೀಡಿದ್ದಾರೆ.ಹರ್ಷವರ್ಧನ್ ವಿರುದ್ಧ ರೇಪ್ ಕೇಸ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲಾಗಿದೆ. ಅಲ್ಲದೇ ನಟಿಯನ್ನು ವೈದ್ಯಕೀಯ ತಪಾಸಣೆ ನಡೆಸಿ ಪೊಲೀಸರು ತನಿಖೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿಯಿಂದಲೇ ಸಿಇಟಿ, ನೀಟ್ ಪರೀಕ್ಷೆಗೆ ತರಬೇತಿ

Sun Jan 30 , 2022
ಬೆಂಗಳೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ.ಈ ಹಿಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ […]

Advertisement

Wordpress Social Share Plugin powered by Ultimatelysocial