ಧಾರವಾಡ ಜಿಲ್ಲೆಯ ಅಣ್ಣಿಗೇರಿ, ನವಲಗುಂದ, ಹುಬ್ಬಳ್ಳಿ ಕ್ಷೇತ್ರದ ಹಳ್ಳಿ ಹಳ್ಳಿಯಲ್ಲೂ ಬೆಳೆ ಪರಿಹಾರ, ಬೆಳೆ ವಿಮೆ, ಮನೆ ಪರಿಹಾರ ಬಂದಿಲ್ಲ ಎಂಬ ಮಾತು ಸಂತ್ರಸ್ತರಿಂದ ಕೇಳಿ ಬರುತ್ತಿದೆ ಎಂದು ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ ಆಕ್ರೋಶ ಹೊರ ಹಾಕಿದರು.
ನವಲಗುಂದ ಪಟ್ಟಣದ ಕೋನರಡ್ಡಿ ಜನ ಸಂಪರ್ಕ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ರೈತರಿಗೆ ಹಾಗೂ ಮನೆ ಕಳೆದುಕೊಂಡವರಿಗೆ ಹಾಗೂ ವಿಮಾ ಕಂಪನಿಯಿಂದ ಪರಿಹಾರ ಕೊಡಿಸುವಂತಹ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಒಂದು ವೇಳೆ ನೀವು ಈ ಕೆಲಸವನ್ನು ಮಾಡದೇ ಹೋದಲ್ಲಿ ಮುಂದಿನ ತಿಂಗಳ ಎರಡನೇ ತಾರೀಕಿನಂದು ಹುಬ್ಬಳ್ಳಿಯಲ್ಲಿ ಮಹದಾಯಿ ಕಳಸಾ ಬಂಡೂರಿ ಯೋಜನೆ ಸೇರಿದಂತೆ ಈ ಎಲ್ಲಾ ಬೇಡಿಕೆಗಳಿಗಾಗಿ ಬೃಹತ್ ಪ್ರತಿಭಟನೆಯನ್ನು ಮಾಡಲಾಗುವುದು ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…