ಕರ್ಮ ನಿಮ್ಮನ್ನು ಬಿಡುವುದಿಲ್ಲ ಡಿಕೆ ರವಿ ಪತ್ನಿ ಕುಸುಮ ಟ್ವಿಟ್.

ಐಎಎಸ್ v/s ಐಪಿಎಸ್ ಮಹಿಳಾ ಅಧಿಕಾರಿಗಳ ಜಟಾಪಟಿ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ ರೂಪ ಸರಣಿ ಆರೋಪಗಳನ್ನು ಮಾಡಿರುವ ಬೆನ್ನಲ್ಲೇ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಪತ್ನಿ ಕುಸುಮಾ ಹನುಮಂತರಾಯಪ್ಪ ಟ್ವೀಟ್ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.ರೋಹಿಣಿ ಸಿಂಧೂರಿ ವಿರುದ್ಧದ ಆರೋಪದಲ್ಲಿ ರೂಪಾ ಮೌದ್ಗಿಲ್ ಅವರು ಡಿ.ಕೆ ರವಿ ಸಾವಿನ ಪ್ರಕರಣವನ್ನು ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಡಿ.ಕೆ ರವಿ ಪತ್ನಿ ಟ್ವೀಟ್ ಮಹತ್ವ ಪಡೆದುಕೊಂಡಿದೆ.ಕೇವಲ ಒಂದು ಸಾಲಿನಲ್ಲಿ ಟ್ವೀಟ್ ಮಾಡಿರುವ ಡಿ.ಕೆ ರವಿ ಪತ್ನಿ, “ Karma will get back at you , sooner or later it surely will ” (ನಿಧಾನವಾಗಿ ಅಥವಾ ವೇಗವಾಗಿ, ಒಟ್ಟಿನಲ್ಲಿ ಕರ್ಮ ನಿಮ್ಮನ್ನು ಬಿಡುವುದಿಲ್ಲ) ಎಂದು ಮಾರ್ಮಿಕವಾಗಿ ಬರೆದಿದ್ದಾರೆ.ಡಿ.ಕೆ ರವಿ, ಐಎಎಸ್, ಸಂಭಾವಿತ ವ್ಯಕ್ತಿ.ಸಿಬಿಐ ವರದಿಯಲ್ಲಿ ಅವರ ಚಾಟ್ಸ್ ಬಗ್ಗೆ ಉಲ್ಲೇಖವಿದ್ದು, ರವಿ ಅವರು ಎಂದಾದರೂ ಎಲ್ಲೆ ಮೀರಿ ಮೆಸೇಜ್ ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು.ಆದರೆ ರೋಹಿಣಿ, ಡಿ.ಕೆ ರವಿ ಅವರನ್ನು ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ.ಡಿ.ಕೆ. ರವಿ ತೀರಿ ಹೋದ ಕೆಲ ತಿಂಗಳು ಮುಂಚೆ ಕನ್ನಡದ ಹುಡುಗ, ಐಪಿಎಸ್ ಅಧಿಕಾರಿ ಎನ್ ಹರೀಶ್ ಅವರ ಜತೆ ರೋಹಿಣಿ ಮದುವೆಯಾಗಲಿದ್ದಾರೆ ಎಂಬ ವಿಚಾರ ಹರಿದಾಡಿತ್ತು. ಆದರೆ, ಆತ, ಈಕೆಗಾಗಿ ಕಾದು ಕಾದು ಆತ್ಮಹತ್ಯೆ ಮಾಡಿಕೊಂಡದ್ದು, ಎಂದು ಹಲವರು ಹೇಳಿದರೂ, ನಾನು ಅದನ್ನು ನಂಬಲಿಲ್ಲ, ಈಗಲೂ ನಂಬಿಲ್ಲ ಎಂದು ರೂಪಾ ಮೌದ್ಗಿಲ್ ಟ್ವೀಟ್ ಮಾಡಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೊಸ ಚಿಹ್ನೆ ಪಡೆಯಲು ಉದ್ದವ್ ಗೆ ಶರದ್ ಪವಾರ್ ಸಲಹೆ.

Mon Feb 20 , 2023
ಚುನಾವಣಾ ಆಯೋಗದ , ಒಮ್ಮೆ ನಿರ್ಧಾರ ನೀಡಿದ ನಂತರ ಯಾವುದೇ ಚರ್ಚೆ ಸಾಧ್ಯವಿಲ್ಲ, ಅದನ್ನು ಸ್ವೀಕರಿಸಿ ಮತ್ತು ಹೊಸ ಚಿಹ್ನೆ ತೆಗೆದುಕೊಳ್ಳಿ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಾಜಿ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಸಲಹೆ ನೀಡಿದ್ದಾರೆ.ಹಳೆಯ ಚಿಹ್ನೆ ಬಿಲ್ಲು ಬಾಣದ ನಷ್ಟ ಯಾವುದೇ ದೊಡ್ಡ ಪರಿಣಾಮ ಬೀರುವುದಿಲ್ಲ ಏಕೆಂದರೆ ಜನರು ಸ್ವೀಕರಿಸುತ್ತಾರೆ. ಹೊಸ ಚಿಹ್ನೆ ತೆಗೆದುಕೊಳ್ಳಿ ಎಂದು ಕಿವಿ ಮಾತು ಹೇಳಿದ್ದಾರೆ.ಮುಖ್ಯಮಂತ್ರಿ ಏಕನಾಥ ಶಿಂಧೆಬಣಕ್ಕೆ ಶಿವಸೇನೆಯ […]

Advertisement

Wordpress Social Share Plugin powered by Ultimatelysocial