ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲಿ ಡಿ.ಕೆ. ಶಿವಕುಮಾರ್ ಆಗ್ರಹ.

‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪನವರ ಹೆಸರಿಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅವರು ವಿಮಾನ ನಿಲ್ದಾಣಕ್ಕೆ ಯಾರ ಹೆಸರನ್ನಾದರೂ ಇಡಲಿ ಆದರೆ ಜಮೀನು ಕಳೆದುಕೊಂಡವರಿಗೆ ಮೊದಲು ಪರಿಹಾರ ನೀಡಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ಗುರುವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು;ವಿಐಎಸ್ಎಲ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ವಿಐಎಸ್ಎಲ್ ವಿಚಾರವಾಗಿ ನಾವು ನಿನ್ನೆ ನೀಡಿರುವ ಹೇಳಿಕೆಗೆ ಬದ್ಧರಾಗಿದ್ದೇವೆ. ಈ ಕಾರ್ಖಾನೆಯನ್ನು ಮುಚ್ಚಬಾರದು, ಸರ್ಕಾರವೇ ನಡೆಸಬೇಕು. ಅವರಿಂದ ಸಾಧ್ಯವಾಗದಿದ್ದರೆ, ನಮ್ಮ ಸರ್ಕಾರ ಬಂದು ಆ ಕೆಲಸ ಮಾಡಲಿದೆ. ಬಿಜೆಪಿಯವರು ಖಾಸಗೀರಣದ ತೀರ್ಮಾನ ಕೈಬಿಟ್ಟು, ಕೇಂದ್ರ ಸಚಿವರು ಕೊಟ್ಟ ಮಾತಿನಂತೆ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿಸಿ, ನಿಗದಿ ಮಾಡಲಾಗಿರುವ ಗಣಿ ಭೂಮಿಯಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಿ’ ಎಂದರು.ಕಾಂಗ್ರೆಸ್ ನಲ್ಲಿ ನಾಯಕರಿಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ‘ನಾವು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಮಾಡುತ್ತೇವೆ ಎಂದು ಹೇಳಿದ್ದೇವೆ. ಆದರೆ ಅಮಿತ್ ಶಾ ಅವರು ಈ ಹಿಂದೆ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿದ್ದು, ಇತ್ತೀಚೆಗೆ ಪ್ರಧಾನಿ ನರೇದ್ರ ಮೋದಿ ಅವರ ನೇತೃತ್ವದಲ್ಲಿ ಚುನಾವಣೆ ಮಾಡುತ್ತೇವೆ ಎಂದಿದ್ದಾರೆ. ಬಿಜೆಪಿಯವರು ಯಡಿಯೂರಪ್ಪನವರಿಗೆ ಕಣ್ಣೀರು ಹಾಕಿಸಿ ಅಧಿಕಾರದಿಂದ ಕೆಳಗಿಳಿಸಿದ್ದು ಯಾಕೆ? ಈ ಬಗ್ಗೆ ಮೊದಲು ಅವರು ಉತ್ತರ ನೀಡಲಿ. ಅವರಿಗೆ 75 ವರ್ಷ ದಾಟಿದ್ದರೂ ಯಡಿಯೂರಪ್ಪನವರ ಮುಖಂಡತ್ವದಲ್ಲಿ ಚುನಾವಣೆ ಮಾಡಿ, ನಂತರ ಆಪರೇಷನ್ ಕಮಲಕ್ಕೆ ಅವಕಾಶ ನೀಡಿ, ನಂತರ ಅವರಿಂದ ಯಾವ ತಪ್ಪಾಗಿತ್ತು ಎಂದು ಅಧಿಕಾರ ಕಿತ್ತುಕೊಂಡಿರಿ? ಎಂದು ಜನರಿಗೆ ಮಾಹಿತಿ ನೀಡಿ’ ಎಂದು ತಿಳಿಸಿದರು.ಇಡಿ ನೊಟೀಸ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಯಂಗ್ ಇಂಡಿಯಾಗೆ ದೇಣಿಗೆ ನೀಡಿದ ವಿಚಾರವಾಗಿ ನಾವು ಈ ಹಿಂದೆ ಇಡಿ ಅಧಿಕಾರಿಗಳಿಗೆ ಉತ್ತರ ನೀಡಿ ಬಂದಿದ್ದೇವೆ. ಆದರೂ ಈಗ ಮತ್ತೆ ವಿಚಾರಣೆಗೆ ನೊಟೀಸ್ ನೀಡಿದ್ದಾರೆ. ಇನ್ನು ಸಿಬಿಐ ಮೂಲಕ ಮಗಳ ಕಾಲೇಜಿನ ಶುಲ್ಕದ ಬಗ್ಗೆ ವಿಚಾರಣೆಗೆ ಮುಂದಾಗಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ.

Thu Feb 9 , 2023
ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂತಸದ ದಿನದಂದೇ ಹೈಡ್ ಅಂಡ್ ಸೀಕ್ ಚಿತ್ರತಂಡ ಸಿನಿಮಾದ ಪೋಸ್ಟರ್ ಲಾಂಚ್ ಮಾಡಿ ಚಿತ್ರದ ನಾಯಕ ನಟನಿಗೆ ಶುಭಕೋರಿದೆ.ಪುನೀತ್ ನಾಗರಾಜು ನಿರ್ದೇಶನದಲ್ಲಿ ಮೂಡಿ ಬರ್ತಿರುವ […]

Advertisement

Wordpress Social Share Plugin powered by Ultimatelysocial