ಬಹಳ ಅಂದರೆ ನನ್ನ ಜೈಲಿಗೆ ಹಾಕಬಹುದು, ಖುಷಿ ಪಡಬಹುದು: ಡಿ.ಕೆ.ಶಿವಕುಮಾರ್

ಮೇಕೆದಾಟು ಮಾಡ್ಲಿ, ಬಿಡ್ಲಿ. ನನ್ನ ವಿರುದ್ಧ ಏನೆಲ್ಲ ಪ್ರಯತ್ನ ನಡೆಯಬೇಕೋ ನಡೆಯುತ್ತಿದೆ. ಒಂದು ದಿನ ಕೇಸ್ ಹಾಕಬಹುದಿತ್ತು. ದಿನಾ ಕೇಸ್ ಹಾಕುವ ಪ್ರಮೇಯ ಏನಿತ್ತು. ನಮ್ಮ ಮೇಲೆ ಅಷ್ಟೇ ಯಾಕೆ ಕೇಸ್. ಬಿಜೆಪಿ ಅವರ ಮೇಲೆ ಕೇಸ್ ಹಾಕಿಲ್ಲ. ಬಹಳ ಅಂದ್ರೆ ಜೈಲಿಗೆ ಹಾಕಬಹುದು, ಖುಷಿ ಪಡಬಹುದು, ಪಡಲಿ ಬಿಡಿ ಎಂದರು.ಮೇಕೆದಾಟು ಯೋಜನೆ ಬದಲು, ಬೆಂಗಳೂರಿನಲ್ಲಿ ಕೆರೆ ಅಭಿವೃದ್ಧಿ ಮಾಡುವ ವಿಚಾರವಾಗಿ ಬಗ್ಗೆ ಸರ್ಕಾರವೇ ಒಂದು ಸಮಿತಿ ರಚನೆ ಮಾಡಲಿ. ಮತ್ತೆ 5 ದಿನಗಳ ಪಾದಯಾತ್ರೆ ಮಾಡುವ ಸಂಕಲ್ಪ ಮಾಡಲಾಗಿದೆ. ಈಗಿರುವ ಕೊರೊನಾ ಮಾರ್ಗಸೂಚಿ ಸಡಿಲ ಆದ ನಂತರ ಪಾದಯಾತ್ರೆ ಮಾಡ್ತೇವೆ ಎಂದು ತಿಳಿಸಿದರು. ಟಾರ್ಗೆಟ್ ಶಿವಕುಮಾರ್ ಮಾಡಿದ್ರೂ ಹೋರಾಟಕ್ಕೆ ಸಿದ್ದ, ದಿನಾ ಒಂದು ಕೇಸ್ ಹಾಕ್ತಾರೆ. CM ರಾಮನಗರಕ್ಕೆ ಬಂದಾಗಲೆ ಕೇಸ್ ದಾಖಲಾಗಬೇಕಿತ್ತು ಯಾಕಿಗಿಲ್ಲ? ನಾವು ಕೋರ್ಟ್​​ಗೂ ಹಾಕ್ತಿವಿ,  ಸರ್ಕಾರಕ್ಕೂ ಕಾಗದ ಬರಿತೇವೆ. ನಮಗೂ ಕಾಲ ಬರುತ್ತೆ, ಕಾಲ ಎಲ್ಲದಕ್ಕೂ ಉತ್ತರ ನೀಡುತ್ತೆ ಎಂದು ಬಿಜೆಪಿ ಸರ್ಕಾರದ ಕ್ರಮಕ್ಕೆ ತಿರುಗೇಟು ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

8 ಆಸನಗಳ ವಾಹನಗಳಿಗೆ 6 ಏರ್ ಬ್ಯಾಗ್ ಕಡ್ಡಾಯ: ನಿತಿನ್ ಗಡ್ಕರಿ.

Sat Jan 15 , 2022
8 ಆಸನಗಳನ್ನು ಹೊಂದಿರುವ ಎಲ್ಲಾ ಖಾಸಗಿ ವಾಹನಗಳೂ ಇನ್ನು ಮುಂದೆ 6 ಏರ್ ಬ್ಯಾಗ್ ಗಳನ್ನು ಹೊಂದಿರುವುದು ಕಡ್ಡಾಯವಾಗಿರಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಈ ಸಂಬಂಧ ಗೆಝೆಟ್ ನೋಟಿಫಿಕೇಶನ್ ನ ಕರಡು ಪ್ರತಿಗೆ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ. ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ನಡೆ ಸಹಕಾರಿಯಾಗಲಿದ್ದು, ಜೊತೆ ಜೊತೆಗೇ ವಾಹನಗಳ ಬೆಲೆಯಲ್ಲಿಯೂ ಏರಿಕೆಯಾಗುವ ಸಾಧ್ಯತೆ ಇದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

Advertisement

Wordpress Social Share Plugin powered by Ultimatelysocial