ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಪತ್ರಿಕಾಗೋಷ್ಠಿಯಲ್ಲಿ ಕುಳಿತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಗ್ಗೆ ಪಿಸುಮಾತು ಆಡಿದ್ದ ಮಾಜಿ ಶಾಸಕ ಅಶೋಕ್ ಪಟ್ಟಣ್ಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ ನೀಡಿದೆ.ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್ ತಪ್ಪಿಸುವ ಕುರಿತಾಗಿ ಅಶೋಕ ಪಟ್ಟಣ್ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಪಿಸುಮಾತು ಆಡಿದ್ದರು.ಈ ವಿಡಿಯೋ ವೈರಲ್ ಆಗಿತ್ತು.ಈ ಹಿನ್ನಲೆಯಲ್ಲಿ ಅಶಿಸ್ತಿನ ನಡವಳಿಕೆ ಎಂದು ಪರಿಗಣಿಸಿ ರೆಹಮಾನ್ ಖಾನ್ ನೇತೃತ್ವದ ಕೆಪಿಸಿಸಿ ಶಿಸ್ತು ಸಮಿತಿ ವಿವರಣೆ ಕೇಳಿ ಅಶೋಕ ಪಟ್ಟಣ್ಗೆ ನೋಟಿಸ್ ನೀಡಿದೆ. ಏಳು ದಿನದ ಒಳಗೆ ಉತ್ತರ ನೀಡುವಂತೆ ಸೂಚನೆ ನೀಡಲಾಗಿದೆ.ಪಕ್ಷದ ನಾಯಕರೂ, ಅನುಭವಿ ಶಾಸಕರೂ ಆದ ನೀವು ಖಾಸಗಿಯಾಗಿ ಮಾತನಾಡುವಾಗ ಕೆಪಿಸಿಸಿ ಅಧ್ಯಕ್ಷರ ಘನತೆಗೆ ಕುಂದುಂಟಾಗುವಂತೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಪಾರ ಹಾನಿಯಾಗುವಂತಹ ವಿಚಾರಗಳನ್ನು ಮಾತನಾಡಿರುವುದು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.ತಾವು ಮಾತನಾಡಿರುವ ವಿಚಾರಗಳು ಸಂಪೂರ್ಣ ಆಧಾರರಹಿತವಾಗಿವೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ತಮ್ಮ ಈ ವರ್ತನೆಯಿಂದ ಪಕ್ಷದ ಘನತೆ-ಗೌರವಕ್ಕೆ ಕುಂದುಂಟಾಗಿದೆ. ಪಕ್ಷ ವಿರೋಧಿ ಚಟುವಟಿಕೆಯಾಗಿದೆ. ತಮ್ಮ ನಡವಳಿಕೆ ಬಗ್ಗೆ ಏಳು ದಿನದಲ್ಲಿ ಸಮಾಜಾಯಿಷಿ ನೀಡಬೇಕು ಎಂದು ಈ ಮೂಲಕ ಸೂಚಿಸಲಾಗಿದೆ ಎಂದು ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ನಲ್ಲಿ ತಿಳಿಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada