ದೊಡ್ಡಹಟ್ಟಿ ಬೋರೇಗೌಡ ಟ್ರೇಲರ್ ಗೆ ಮೆಚ್ಚುಗೆ.

ಗ್ರಾಮೀಣ ಸೊಗಡಿನ “ದೊಡ್ಡಹಟ್ಟಿ ಬೋರೇಗೌಡ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಮೆಚ್ಚುಗೆ ವ್ಯಕ್ತವಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ ಮುಂದಿನ ತಿಂಗಳು ಚಿತ್ರ ತೆರೆಗೆ ಬರಲಿದೆ ಟ್ರೈಲರ್ ಬಿಡುಗಡೆ ವೇಳೆ ಮಾತಿಗಿಳಿದ ನಿರ್ದೇಶಕ ಕೆ‌.ಎಂ.ರಘು, “ದೊಡ್ಡಹಟ್ಟಿ ಬೋರೇಗೌಡ”  ಮನೆಯ ಸುತ್ತ ಹೆಣೆಯಲಾಗಿರುವ ಕಥೆ. ಹಳ್ಳಿಯಲ್ಲಿ ಬಡವರಿಗೆ ಸರ್ಕಾರದಿಂದ ನೀಡುವ ಆಶ್ರಯ ಯೋಜನೆ ಮನೆ  ಪಡೆದುಕೊಳ್ಳಲು ಯಾವರೀತಿ ಕಷ್ಟಪಡುತ್ತಾನೆ ಎಂಬುದನ್ನು ಚಿತ್ರದಲ್ಲಿ ತೋರಿಸಿದ್ದೇವೆ ಎಂದರು.ಬೆಂಗಳೂರು ಅಂತರರಾಷ್ಟ್ರೀಯಚಿತ್ರೋತ್ಸವದಲ್ಲಿ ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿ ಕೂಡ ದೊರಕಿದೆ. ಇದು ಕಲಾತ್ಮಕ ಚಿತ್ರ ಅಲ್ಲ. ಕಮರ್ಷಿಯಲ್ ಚಿತ್ರ. ಚಿತ್ರದಲ್ಲಿ ಗ್ರಾಮೀಣ ಪ್ರತಿಭೆಗಳೇ ಅಭಿನಯಿಸಿರುವುದು ವಿಶೇಷ. ಮೂರು ತಿಂಗಳ ಕಾಲ ಎಲ್ಲರಿಗೂ ತರಬೇ ನೀಡಲಾಗಿದೆ ಎಲ್ಲರ ಸಹಕಾರವಿರಲಿ ಎಂದರು.ನಟ ಶಿವಣ್ಣ ಬೀರಹುಂಡಿ,ಗ್ರಾಮ ಪಂಚಾಯತಿ ಸದಸ್ಯರನಾಗಿ ಕಾರ್ಯ ನಿರ್ವಹಿಸಿದ್ದೇನೆ. ರಂಗಭೂಮಿಯ ಅನುಭವವಿದೆ.‌ ಹಿರಿತೆರೆಯಲ್ಲಿ ಮೊದಲ ಚಿತ್ರ ಎಂದರು.ಚಿತ್ರದಲ್ಲಿ ಅಭಿನಯಿಸಿರುವ ಗೀತಾ, ಲಾವಣ್ಯ, ಕಲಾರತಿ ಮಹದೇವ್, ಕಾತ್ಯಾಯಿನಿ, ಯೋಗೇಶ್ ಮುಂತಾದ ಅನುಭವ ಹಂಚಿಕೊಂಡರು. ನಿರ್ಮಾಪಕರಾದ ಶಶಿಕುಮಾರ್ ಬಿ ಸಿ ಹಾಗೂ ಲೋಕೇಶ್ ಕೆ.ಎಂ ಹಾಗೂ  ಬಿಡುಗಡೆಗೆ ಸಹಕಾರ ನೀಡಿರುವ ವೆಂಕಟೇಶ್ ಮತ್ತು  ಜಿ.ಅನ್ನಪೂರ್ಣ ಇದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಹಗರಣಗಳು ಒಂದೊಂದಾಗಿ ಹೊರಗೆ ಬರುತ್ತಿವೆ.

Wed Jan 18 , 2023
ದಾವಣಗೆರೆ, ಜನವರಿ, 18: ಬಿಜೆಪಿ ಹಗರಣಗಳು ಒಂದೊಂದಾಗಿ ಹೊರಗೆ ಬರುತ್ತಿವೆ. ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಕಾಂಗ್ರೆಸ್‌ ಪರ ಅಲೆ ಎದ್ದಿದ್ದು, ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ದಾವಣಗೆರೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು‌. ನಗರದ ಹೈಸ್ಕೂಲ್ ಮೈದಾನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದೆಲ್ಲೆಡೆ ಕಾಂಗ್ರೆಸ್ ಪಕ್ಷದ ಕಡೆ ಒಲವು ಹೆಚ್ಚಿದೆ.‌ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು […]

Advertisement

Wordpress Social Share Plugin powered by Ultimatelysocial