`ಡಾಲರ್ಸ್ ಪೇಟೆ’ ಚಿತ್ರೀಕರಣ ಪೂರ್ಣ.

ಡಾಲರ್ಸ್ ಪೇಟ್ ಚಿತ್ರದ ಮೂಲಕ ಮೋಹನ್ ಎನ್ ಮುನಿ ನಾರಾಯಣಪ್ಪ ನಿರ್ದೇಶಕನಾಗಿ ಬಡ್ತಿ ಪಡೆದಿದ್ದಾರೆ. ಚಿತ್ರೀಕರಣ ಪೂರ್ಣಗೊಂಡಿರುವಾ ಮಾಡಿ ಚಿತ್ರದ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಫಸ್ಟ್ ಲುಕ್ ಮೂಲಕ ಗಮನ ಸೆಳೆದಿತ್ತು. ಇದೀಗ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್ ರಿವೀಲ್ ಮಾಡಿ ಕುತೂಹಲ ಹೆಚ್ಚಿಸಿದೆ.ಹೈಪರ್ ಲಿಂಕ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ಲೂಸಿಯ ಖ್ಯಾತಿಯ ನಿರ್ದೇಶಕ ಪವನ್ ಪತ್ನಿ ಸೌಮ್ಯ ಜಗನ್ ಮೂರ್ತಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.ಚಿತ್ರದಲ್ಲಿ ಸೌಮ್ಯ ಜಗನ್ ಮೂರ್ತಿ ಕ್ಯಾಶಿಯರ್ ಪಾತ್ರವನ್ನು ನಿರ್ವಹಿಸಿದ್ದಾರೆ ಮುಂದಿನ ದಿನಗಳಲ್ಲಿ ಉಳಿದ ಕಲಾವಿದರ ಪೋಸ್ಟರ್ ಬಿಡುಗಡೆ ಮಾಡೋದಾಗಿ ಚಿತ್ರತಂಡ ತಿಳಿಸಿದೆ.ಚಿತ್ರದಲ್ಲಿ ಆಕರ್ಷ್ ಕಮಲ, ವೆಂಕಟ್ ರಾಜು ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದು, ಪೃಥ್ವಿ ಅಂಬರ್ ಗೆಸ್ಟ್ ಅಪಿಯರೆನ್ಸ್ ಚಿತ್ರದಲ್ಲಿದೆ. ಉಳಿದಂತೆ ಕುಶಾಲ್.ಎಸ್, ದತ್ತು, ರಾಘವೇಂದ್ರ, ಹೊನ್ನವಳ್ಳಿ, ಡ್ರಾಮಾ ಜೂನಿಯರ್ಸ್ ಮಹೇಂದ್ರ ಒಳಗೊಂಡ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.ಸೂರಜ್ ಜೋಯಿಸ್ ಸಂಗೀತ , ಆನಂದ್ ಸುಂದರೇಶ ಕ್ಯಾಮರ ಚಿತ್ರಕ್ಕಿದೆ. ಕ್ಯಾಮೆರಾ ವರ್ಕ್, ಮಹೇಶ್ ತೊಗಟ್ಟ ಸಂಕಲನ, ಅರ್ಜುನ್ ರಾಜ್ ಮತ್ತು ನರಸಿಂಹ ಸಾಹಸ ನಿರ್ದೇಶನ ಹಾಗೂ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಪೆಂಟ್ರಿಕ್ಸ್ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಪೂಜಾ.ಟಿ.ವೈ ‘ಡಾಲರ್ಸ್ ಪೇಟೆ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದು ಬೆಳಿಗ್ಗೆ ನಿಧನರಾದ ಖ್ಯಾತ ಕನ್ನಡ ಕವಿ,

Mon Jan 30 , 2023
ಬೆಂಗಳೂರು : ಇಂದು ಬೆಳಿಗ್ಗೆ ನಿಧನರಾದ ಖ್ಯಾತ ಕನ್ನಡ ಕವಿ, ವಿಮರ್ಶಕ, ಭಾಷಾ ಶಾಸ್ತ್ರಜ್ಞ ಕೆ ವಿ ತಿರುಮಲೇಶ್ ಅವರ ನಿಧನ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ. ಖ್ಯಾತ ಕನ್ನಡ ಕವಿ, ವಿಮರ್ಶಕ, ಭಾಷಾ ಶಾಸ್ತ್ರಜ್ಞ ಕೆ ವಿ ತಿರುಮಲೇಶ್ ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ. ಅವರ ಸಾಹಿತ್ಯ ಕೃಷಿ, ಜ್ಞಾನ ಸಂಪತ್ತು ಅನುಪಮವಾದುದು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಗಲಿಕೆಯ ನೋವನ್ನು […]

Advertisement

Wordpress Social Share Plugin powered by Ultimatelysocial