ಕೊಳ್ಳೇಗಾಲ ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಜನವರಿ 8 ರಂದು ಡಾ.ವಿಷ್ಣುವರ್ಧನ್ ಪುಣ್ಯ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು,ಕೊಳ್ಳೇಗಾಲ ವಿಧಾನಸಭಾ ಕ್ಷೆತ್ರದ ಎಲ್ಲಾರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಡಾ. ವಿಷ್ಣು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಹ್ವಾನ ಮಾಡಲಾಯಿತು……
ಡಾ.ವಿಷ್ಣು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರಾದ ಕೆ. ಆರ್. ಬಾಲರಾಜು ರವರು ಮಾತನಾಡಿ ಡಾ. ವಿಷ್ಣುವರ್ಧನ್ ರವರ 13ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಡಾ.ವಿಷ್ಣು ಸಮಾಜ ಸೇವಾ ಟ್ರಸ್ಟ್ ಹಾಗೂ ಪ್ರಲಕ್ಷ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮೈಸೂರು ಇವರ ಸಹಯೋಗದಲ್ಲಿ ಬೃಹತ್ ಮಟ್ಟದ ಉಚಿತ ಆರೋಗ್ಯ ತಪಾಸಣೆ, ವಿವಿಧ ಶಾಲಾ ಮಕ್ಕಳು ಮಕ್ಕಳಿಗೆ ನೋಟ್ ಬುಕ್ ವಿತರಣೆ, ಅನ್ನದಾನ ಕಾರ್ಯಕ್ರಮ, ಗಣ್ಯರಿಗೆ ಸನ್ಮಾನ ಹಾಗೂ ರಸ ಮಂಜರಿ ಕಾರ್ಯವನ್ನು ಮಾಡಲಾಗುವುದು…
ಕೊಳ್ಳೇಗಾಲದ ಚೌಡೆಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ವಿಷ್ಣುವರ್ಧನ್ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು…..
ನಂತರ ಸಮಿತಿಯ ಪದಾಧಿಕಾರಿಗಳು ಕಾರ್ಯಕ್ರಮ ಆಹ್ವಾನದ ಪೋಸ್ಟರ್ ಬಿಡುಗಡೆ ಮಾಡಿದರು….
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada