ಇಂದು ಉದ್ಘಾಟನೆ ಆಗಿರುವ ಸ್ಮಾರಕದ ಕಾರ್ಯಕ್ರಮಕ್ಕೆ ಕನ್ನಡ ಸಿನಿಮಾ ರಂಗದ ಕೆಲವು ಗಣ್ಯರು ಶುಭ ಕೋರಿದ್ದಾರೆ.

ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಲೋಕಾರ್ಪಣೆ ಆಗಿದೆ. ಸತತ 13 ವರ್ಷಗಳ ಹೋರಾಟದ ಫಲವಾಗಿ ಇಂದು ಉದ್ಘಾಟನೆ ಆಗಿರುವ ಸ್ಮಾರಕದ ಕಾರ್ಯಕ್ರಮಕ್ಕೆ ಕನ್ನಡ ಸಿನಿಮಾ ರಂಗದ ಕೆಲವು ಗಣ್ಯರು ಶುಭ ಕೋರಿದ್ದಾರೆ.

ಇನ್ನು ಈ ಕುರಿತು ಸ್ಯಾಂಡಲ್​​ವುಡ್​​ ಹ್ಯಾಟ್ರಿಕ್​​ ಹೀರೋ ಶಿವರಾಜ್​​ ಕುಮಾರ್​ ತಮ್ಮ ಇನ್​​ಸ್ಟಾಗ್ರಾಮ್​​​ನಲ್ಲಿ ಡಾ.ವಿಷ್ಣುವರ್ಧನ್ ಅವರ ಜೊತೆ ಇರೋ ಫೋಟೋವನ್ನು ಶೇರ್​​ ಮಾಡಿ ಪೋಸ್ಟ್​​ವೊಂದು ಹಾಕಿದ್ದಾರೆ. ಜತೆಗೆ 13 ವರ್ಷಗಳ ಸುದೀರ್ಘ ಕಾಯುವಿಕೆ ನಂತರ ಮೈಸೂರಿನಲ್ಲಿ ನಮ್ಮ ಪ್ರೀತಿಯ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಲೋಕಾರ್ಪಣೆ ಆಗುತ್ತಿರುವುದು ಮನಸ್ಸಿಗೆ ಖುಷಿ ನೀಡಿದೆ. ಸ್ಮಾರಕ ನಿರ್ಮಾಣಕ್ಕೆ ಕಾರಣರಾದ ವಿಷ್ಣು ಕುಟುಂಬಕ್ಕೆ, ಸರ್ಕಾರಕ್ಕೆ ಹಾಗೂ ಅಭಿಮಾನಿಗಳಿಗೆ ನನ್ನ ಧನ್ಯವಾದಗಳು. ವಿಷ್ಣುವರ್ಧನ್ ಹಾಗೂ ನಮ್ಮ ಕುಟುಂಬದ ಬಾಂಧವ್ಯ ಮತ್ತು ಒಡನಾಟ ಬಹಳಷ್ಟಿವೆ ಎಂದು ಬರೆದುಕೊಂಡಿದ್ದಾರೆ.

ವಿಷ್ಣುವರ್ಧನ್ ನಮ್ಮ ತಂದೆ ಡಾ.ರಾಜ್ ಅವರನ್ನು ಬಹಳಷ್ಟು ಪ್ರೀತಿ ಗೌರವ ಅಭಿಮಾನದಿಂದ ಕಾಣುತ್ತಿದ್ದರು. ಅಪ್ಪಾಜಿ ಹಾಗೂ ನಮ್ಮ ಕುಟುಂಬ ಕೂಡ ವಿಷ್ಣು ಅವರನ್ನು ತುಂಬು ಪ್ರೀತಿಯಿಂದ ಕಂಡಿದ್ದೇವೆ. ವಿಷ್ಣುವರ್ಧನ್ ಅವರ ಅಭಿಮಾನಿಗಳ ಕೋರಿಕೆ ಕೊನೆಗೂ ಸ್ಮಾರಕ ರೂಪದಲ್ಲಿ ಈಡೇರುತ್ತಿರುವ ವಿಷಯ ನನಗೆ ಹಾಗೂ ನಮ್ಮ ಚಿತ್ರರಂಗಕ್ಕೆ ಬಹಳ ಹೆಮ್ಮೆಯ ವಿಷಯ ಎಂದು ಬರೆದುಕೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

German Dating Etiquette

Mon Jan 30 , 2023
With cobbled piazzas, exquisite dishes and wonderful panoramas, Italia has a standing as a terrain made for https://mailorderbride123.com/europe/united-kingdom/ lovers. Yet , Italians can easily end up being somewhat classical and sticklers for several unwritten manners. Be authentic and sincere. Italians have a very appropriate B. Ring. radar and will eventually […]

Advertisement

Wordpress Social Share Plugin powered by Ultimatelysocial