ರಾಮನಗರ: 100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಜಿಲ್ಲಾಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ತಳ್ಳಾಟ, ನೂಕಾಟ ನಡೆದು ದೊಡ್ಡ ಹೈಡ್ರಾಮಾ ಸೃಷ್ಟಿಯಾಗಿದೆ.
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಅವರು ಬರುವವರೆಗೂ ಕಾಯಿರಿ.
ಆತುರದಲ್ಲಿ ಉದ್ಘಾಟನೆ ಮಾಡುವುದು ಬೇಡ ಎಂದು ಸಚಿವ ಡಾ.ಸುಧಾಕರ್ಗೆ ಶಾಸಕ ಎ.ಮಂಜುನಾಥ ಹಾಗೂ ಕಾರ್ಯಕರ್ತರು ಹೇಳಿದರು. ಆದ್ರೆ ತರಾತುರಿಯಲ್ಲಿ ಸುಧಾಕರ್ ಆಸ್ಪತ್ರೆಯನ್ನು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ.. ಮೋದಿ ಎಂದು ಘೋಷಣೆ ಕೂಗಿದ್ದಾರೆ.
ಇದರಿಂದ ಜೆಡಿಎಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿ HDK.. HDK ಎಂದು ಕೂಗಿದರು. ಹೀಗಾಗಿ ಸ್ಥಳದಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ತಳ್ಳಾಟ, ನೂಕಾಟ ನಡೆಯಿತು. ಎರಡು ಪಕ್ಷದ ಕಾರ್ಯಕರ್ತರನ್ನ ಸಮಾಧಾನ ಪಡಿಸಲು ಪೊಲೀಸರು ಹರಸಾಹಸವೇ ಪಟ್ಟರು.
ಇದಕ್ಕೂ ಮೊದಲು ಜಿಲ್ಲಾಸ್ಪತ್ರೆ ಉದ್ಘಾಟನೆಗಾಗಿ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್, ಆರೋಗ್ಯ ಸಚಿವ ಡಾ.ಸುಧಾಕರ್ ಅವರಿಗೆ ಕಾರ್ಯಕರ್ತರು ಹೂವಿನ ಹಾರ ಹಾಕಿ ಸ್ವಾಗತ ಕೋರಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada