ಕುಮಾರಸ್ವಾಮಿ ಬರೋ ಮೊದಲೇ ಆಸ್ಪತ್ರೆ ಉದ್ಘಾಟಿಸಿದ ಡಾ.ಸುಧಾಕರ್; ರಾಮನಗರದಲ್ಲಿ ಭಾರೀ ಗಲಾಟೆ..!

ರಾಮನಗರ: 100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಜಿಲ್ಲಾಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದ ವೇಳೆ ಜೆಡಿಎಸ್​ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ತಳ್ಳಾಟ, ನೂಕಾಟ ನಡೆದು ದೊಡ್ಡ ಹೈಡ್ರಾಮಾ ಸೃಷ್ಟಿಯಾಗಿದೆ.

ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಅವರು ಬರುವವರೆಗೂ ಕಾಯಿರಿ.

ಆತುರದಲ್ಲಿ ಉದ್ಘಾಟನೆ ಮಾಡುವುದು ಬೇಡ ಎಂದು ಸಚಿವ ಡಾ.ಸುಧಾಕರ್​ಗೆ ಶಾಸಕ ಎ.ಮಂಜುನಾಥ ಹಾಗೂ ಕಾರ್ಯಕರ್ತರು ಹೇಳಿದರು. ಆದ್ರೆ ತರಾತುರಿಯಲ್ಲಿ ಸುಧಾಕರ್ ಆಸ್ಪತ್ರೆಯನ್ನು​ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ.. ಮೋದಿ ಎಂದು ಘೋಷಣೆ ಕೂಗಿದ್ದಾರೆ.

ಇದರಿಂದ ಜೆಡಿಎಸ್​ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿ HDK.. HDK ಎಂದು ಕೂಗಿದರು. ಹೀಗಾಗಿ ಸ್ಥಳದಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ತಳ್ಳಾಟ, ನೂಕಾಟ ನಡೆಯಿತು. ಎರಡು ಪಕ್ಷದ ಕಾರ್ಯಕರ್ತರನ್ನ ಸಮಾಧಾನ ಪಡಿಸಲು ಪೊಲೀಸರು ಹರಸಾಹಸವೇ ಪಟ್ಟರು.

ಇದಕ್ಕೂ ಮೊದಲು ಜಿಲ್ಲಾಸ್ಪತ್ರೆ ಉದ್ಘಾಟನೆಗಾಗಿ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್, ಆರೋಗ್ಯ ಸಚಿವ ಡಾ.ಸುಧಾಕರ್ ಅವರಿಗೆ ಕಾರ್ಯಕರ್ತರು ಹೂವಿನ ಹಾರ ಹಾಕಿ ಸ್ವಾಗತ ಕೋರಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜಹಂಸಗಢ ಶಿವಾಜಿ ಪ್ರತಿಮೆ ಇಬ್ಬರ ನಡುವಿನ ಪ್ರತಿಷ್ಠೆಯ ವಸ್ತುವಾಗಿಬಿಟ್ಟಿದೆ.

Thu Mar 2 , 2023
ರಾಜಹಂಸಗಢ ಶಿವಾಜಿ ಪ್ರತಿಮೆ ಇಬ್ಬರ ನಡುವಿನ ಪ್ರತಿಷ್ಠೆಯ ವಸ್ತುವಾಗಿಬಿಟ್ಟಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ನಡುವಿನ ಪಾರುಪತ್ಯದ ಫೈಟ್​​ಗೆ ಇವತ್ತು ಕ್ಲೈಮ್ಯಾಕ್ಸ್. ಹೆಬ್ಬಾಳ್ಕರ್​​ಗೆ ಸೆಡ್ಡು ಹೊಡೆದ ಸಾಹುಕಾರ್ ಶಿವಾಜಿ ಪ್ರತಿಮೆ ಅನಾವರಣಕ್ಕೆ ಇವತ್ತೇ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಈ ನಡುವೆ ಶಾಸಕಿಯ ಆಪ್ತೆ ಗ್ರಾಮಸ್ಥರಿಗೆ ಧಮ್ಕಿ ಹಾಕಿರೋ ಆಡಿಯೋ ಕೂಡಾ ವೈರಲ್ ಆಗಿದೆ. ಬೆಳಗಾವಿ ಅಂದ್ರೆ ಥಟ್ ಅಂತಾ ನೆನಪಾಗೋದು ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ […]

Advertisement

Wordpress Social Share Plugin powered by Ultimatelysocial