ಕೊರೋನಾ ಮೂರನೇ ಅಲೆ, ಓಮಿಕ್ರಾನ್ ಬಗ್ಗೆ ಆಲಕ್ಷ್ಯ ಬೇಡ, ಕೆಲವರಿಗೆ ಸೋಂಕಿನ ತೀವ್ರತೆಯಿದೆ, ಯಾರೂ ಕೂಡ ನಿರ್ಲಕ್ಷ್ಯ, ಉದಾಸೀನ ಮಾಡಬೇಡಿ, ಜನರ ಮುಂದೆ ಇರುವಾಗ, ಹೊರಗೆ ಓಡಾಡುವಾಗ, ಕಚೇರಿಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸ್ ಮಾಡಿಕೊಳ್ಳಿ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಲಾಕ್ ಡೌನ್ ಹೇರಿಕೆ ಸರಿಯಲ್ಲ: ಈಗಾಗಲೇ ಎರಡು ಬಾರಿ ಲಾಕ್ ಡೌನ್ ಹೇರಿಕೆ ಮಾಡಲಾಗಿತ್ತು. ಆಗ ಜನರಿಗೆ ಆಗುವ ಸಮಸ್ಯೆಗಳ ಬಗ್ಗೆ ನಮಗೆ ಅರಿವಾಗಿದೆ, ಈಗಾಗಲೇ ನಿನ್ನೆ ಪ್ರಧಾನ ಮಂತ್ರಿ ಮೋದಿಯವರು ಮುಖ್ಯಮಂತ್ರಿಗಳ ಜೊತೆ ಸಂವಾದ ಮಾಡುವ ಸಂದರ್ಭದಲ್ಲಿ ಜನರಿಗೆ ಆರ್ಥಿಕ ನಷ್ಟವಾಗದ ರೀತಿಯಲ್ಲಿ ಜಾಗೃತೆ ವಹಿಸಬೇಕೆಂದು ಹೇಳಿದ್ದಾರೆ, ಆ ನಿಟ್ಟಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಕ್ರಮಕೈಗೊಳ್ಳಿ ಎಂದು ಸಲಹೆ ನೀಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಜನರೇ ಸ್ವಯಂ ನಿಯಂತ್ರಣ ಮಾಡಿಕೊಂಡು ಇನ್ನು ಒಂದೂವರೆ ತಿಂಗಳು ಸಹಕರಿಸಿದರೆ ಖಂಡಿತವಾಗಿಯೂ ಕೊರೋನಾ ನಿಯಂತ್ರಣವಾಗುತ್ತದೆ, ಲಾಕ್ ಡೌನ್ ಹೇರಿಕೆಯೊಂದೇ ಅಸ್ತ್ರವಲ್ಲ, ಎರಡು ತಿಂಗಳು ಜನರು ಕೊರೋನಾ ಮಾರ್ಗಸೂಚಿ, ನಿಯಮಗಳನ್ನು ಪಾಲಿಸಿದರೆ ಇದನ್ನು ನಿಯಂತ್ರಿಸಲು ಖಂಡಿತಾ ಸಾಧ್ಯವಿದೆ ಎಂದು ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada