ಲಾಕ್ ಡೌನ್ ಇಲ್ಲ: ಡಾ.ಕೆ. ಸುಧಾಕರ್ ಸ್ಪಟನೆ. Dr Sudhakar K . Speed news kannada

ಕೊರೋನಾ ಮೂರನೇ ಅಲೆ, ಓಮಿಕ್ರಾನ್ ಬಗ್ಗೆ ಆಲಕ್ಷ್ಯ ಬೇಡ, ಕೆಲವರಿಗೆ ಸೋಂಕಿನ ತೀವ್ರತೆಯಿದೆ, ಯಾರೂ ಕೂಡ ನಿರ್ಲಕ್ಷ್ಯ, ಉದಾಸೀನ ಮಾಡಬೇಡಿ, ಜನರ ಮುಂದೆ ಇರುವಾಗ, ಹೊರಗೆ ಓಡಾಡುವಾಗ, ಕಚೇರಿಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸ್ ಮಾಡಿಕೊಳ್ಳಿ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.  ಲಾಕ್ ಡೌನ್ ಹೇರಿಕೆ ಸರಿಯಲ್ಲ: ಈಗಾಗಲೇ ಎರಡು ಬಾರಿ ಲಾಕ್ ಡೌನ್ ಹೇರಿಕೆ ಮಾಡಲಾಗಿತ್ತು. ಆಗ ಜನರಿಗೆ ಆಗುವ ಸಮಸ್ಯೆಗಳ ಬಗ್ಗೆ ನಮಗೆ ಅರಿವಾಗಿದೆ, ಈಗಾಗಲೇ ನಿನ್ನೆ ಪ್ರಧಾನ ಮಂತ್ರಿ ಮೋದಿಯವರು ಮುಖ್ಯಮಂತ್ರಿಗಳ ಜೊತೆ ಸಂವಾದ ಮಾಡುವ ಸಂದರ್ಭದಲ್ಲಿ ಜನರಿಗೆ ಆರ್ಥಿಕ ನಷ್ಟವಾಗದ ರೀತಿಯಲ್ಲಿ ಜಾಗೃತೆ ವಹಿಸಬೇಕೆಂದು ಹೇಳಿದ್ದಾರೆ, ಆ ನಿಟ್ಟಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಕ್ರಮಕೈಗೊಳ್ಳಿ ಎಂದು ಸಲಹೆ ನೀಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಜನರೇ ಸ್ವಯಂ ನಿಯಂತ್ರಣ ಮಾಡಿಕೊಂಡು ಇನ್ನು ಒಂದೂವರೆ ತಿಂಗಳು ಸಹಕರಿಸಿದರೆ ಖಂಡಿತವಾಗಿಯೂ ಕೊರೋನಾ ನಿಯಂತ್ರಣವಾಗುತ್ತದೆ, ಲಾಕ್ ಡೌನ್ ಹೇರಿಕೆಯೊಂದೇ ಅಸ್ತ್ರವಲ್ಲ, ಎರಡು ತಿಂಗಳು ಜನರು ಕೊರೋನಾ ಮಾರ್ಗಸೂಚಿ, ನಿಯಮಗಳನ್ನು ಪಾಲಿಸಿದರೆ ಇದನ್ನು ನಿಯಂತ್ರಿಸಲು ಖಂಡಿತಾ ಸಾಧ್ಯವಿದೆ ಎಂದು ಡಾ. ಕೆ. ಸುಧಾಕರ್  ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮೇಕೆದಾಟು ಯೋಜನೆಗೆ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ವಿರೋದ....

Fri Jan 14 , 2022
ಕರ್ನಾಟಕ ನೆಲ ಜಲ ರಕ್ಷಣಾ ಸಮಿತಿ ಆಯೋಜಿಸಿದ್ದ ಮೇಕೆದಾಟು ಪರ, ಅಣೆಕಟ್ಟು ವಿರುದ್ಧ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇಕೆದಾಟು ನಮಗೆ ಬೇಕು ಎಂದಾದರೆ ಅಣೆಕಟ್ಟು ಎನ್ನಬೇಕು. ಅಲ್ಲಿ ಅಣೆಕಟ್ಟು ಕಟ್ಟುವುದರಿಂದ ಸುಮಾರು 1200 ಹೆಕ್ಟೇರ್ ಅರಣ್ಯ ಭೂಮಿ ನಾಶವಾಗುತ್ತೆ. ಲಕ್ಷಾಂತರ ಮರಗಳು ಹಾಳುಗೆಡವುವ ಇಂಥ ಯೋಜನೆ ನಮಗೆ ಬೇಕಿಲ್ಲ ಎಂದು ಅಭಿಪ್ರಾಯಪಟ್ಟರು. ಅಣೆಕಟ್ಟು ಕಟ್ಟುವುದರಿಂದ ಯಾರಿಗೆ ಅನುಕೂಲ ಎಂದು ಪ್ರಶ್ನಿಸಿದ ಅವರು, ಅಣೆಕಟ್ಟು ನಿರ್ಮಾಣದಿಂದ ಕೆಲ ರಾಜಕಾರಿಣಿಗಳಿಗೆ ಗುತ್ತಿಗೆದಾರರಿಗೆ […]

Advertisement

Wordpress Social Share Plugin powered by Ultimatelysocial