DIRECTOR:ಸ್ಯಾಂಡಲ್ ವುಡ್ ನಿರ್ಮಾಪಕ ಉಮಾಪತಿ ಕೊಲೆಯತ್ನ ಪ್ರಕರಣ;

ಬೆಂಗಳೂರು : ನಿರ್ಮಾಪಕ ಉಮಾಪತಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ 16 ಹಾಗೂ 17ನೇ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ದರ್ಶನ್ ಹಾಗೂ ಸಂಜು ಎಂಬಾತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಜಯನಗರ ಪೊಲೀಸರಿಗೆ ಒಪ್ಪಿಸಲಾಗಿದೆ.

2020ರ ಡಿಸೆಂಬರ್​ನಲ್ಲಿ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಪಕ ಉಮಾಪತಿ, ಸಹೋದರ ದೀಪಕ್, ರೌಡಿಶೀಟರ್ ಸೈಕಲ್ ರವಿ ಹತ್ಯೆಗೆ ಸಂಚು ರೂಪಿಸಿ ಮಾರಕಾಸ್ತ್ರ ಹಿಡಿದು 15ಕ್ಕಿಂತ ಹೆಚ್ಚು ಮಂದಿ ಪ್ಲ್ಯಾನ್ ಮಾಡಿಕೊಂಡಿದ್ದರು. ಈ ಮಾಹಿತಿ ಅರಿತಿದ್ದ ಅಂದಿನ ಜಯನಗರ ಪೊಲೀಸ್ ಠಾಣೆಯ ಇನ್​​ಸ್ಪೆಕ್ಟರ್ ಹರೀಶ್ ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ 10ಕ್ಕಿಂತ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

POLITICS:ಆರ್.ವಿ.ದೇಶಪಾಂಡೆಯವರ ರಾಜಕೀಯ ನಡೆ;

Sun Jan 23 , 2022
 ಹಳಿಯಾಳದಿಂದ ರಾಷ್ಟ್ರದ ರಾಜಧಾನಿಯವರೆಗೆ ತನ್ನ ಹಿಡಿತ ಸಾಧಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಪಾಂಡೆಯವರಿಗೆ ಮುಂಬರಲಿರುವ ವಿಧಾನ ಸಭಾ ಚುನಾವಣೆ ಜೀವನದ ಕಟ್ಟಕಡೆಯ ಚುನಾವಣೆ. ಆದಾಗ್ಯೂ ಮುಂಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆಯಾದರೂ ವಯಸ್ಸು ಅಡ್ಡ ಬಂದರೆ ಹೊಸಮುಖಕ್ಕೆ ಅವಕಾಶ ದೊರೆಯಬಹುದು. ಸಾಮಾನ್ಯ ತಾಲೂಕಿನಲ್ಲಿ ಹುಟ್ಟಿ, ರಾಜಕೀಯವಾಗಿ ಹಂತ ಹಂತವಾಗಿ ಬೆಳೆದು, ರಾಜ್ಯ, ರಾಷ್ಟ್ರಮಟ್ಟದಲ್ಲಿ ತನ್ನ ವರ್ಚಸ್ವಿ ಗುಣಗಳಿಂದಲೆ ಗುರುತಿಸಿಕೊಂಡ ಮುತ್ಸದಿ ಜನನಾಯಕ. ಅತೀ ಹೆಚ್ಚು ಬಾರಿ […]

Advertisement

Wordpress Social Share Plugin powered by Ultimatelysocial