BIGG BREAKING: ಕೋಮುಭಾವನೆ ಕೆರಳಿಸಿ ಪೋಸ್ಟ್ ಹಾಕಿದ ಪ್ರಶಾಂತ್ ಸಂಬರಗಿ ವಿರುದ್ಧ ಎಫ್‌ಐಆರ್ ದಾಖಲು

BIGG BREAKING: ಕೋಮುಭಾವನೆ ಕೆರಳಿಸಿ ಪೋಸ್ಟ್ ಹಾಕಿದ ಪ್ರಶಾಂತ್ ಸಂಬರಗಿ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಕೋಮುಭಾವನೆ ಕೆರಳಿಸುವಂತೆ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದಂತ ಪ್ರಶಾಂತ್ ಸಂಬರಗಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿಯವರು ಡಿಕೆ ಶಿವಕುಮಾರ್ ಉರೂಪ್ ಡಿಕೆಎಸ್ ದೊಡ್ಡ ದೊಡ್ಡ ಬಂಡೆಗಳನ್ನೇ ಒಡೆದು ಹಾಕಿದವನಿಗೆ Anti Conversion ಬಿಲ್ಲು ಹರಿಯೋದು ಕಷ್ಟವೇನಲ್ಲ ಬಿಡಿ ಎಂಬುದಾಗಿ ಕೋಮುಭಾವನೆ ಕೆರಳಿಸುವಂತ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು.

ಈ ಪ್ರಶಾಂತ ಸಂಬರಗಿಯವರ ಪೋಸ್ಟ್ ಗೆ ಅನೇಕರು ಆಕ್ಷೇಪ ಕೂಡ ವ್ಯಕ್ತ ಪಡಿಸಿದ್ದರು. ಈ ಪೋಸ್ಟ್ ಬಗ್ಗೆ ಇದೀಗ ಆಕ್ಷೇಪಿಸಿ ಹಾಗೂ ಅವರು ಕೋಮುಭಾವನೆ ಕೆರಳಿಸುತ್ತಿದ್ದಾರೆ ಎಂಬುದಾಗಿ ಬೆಂಗಳೂರು ದಕ್ಷಿಣ ಸೈಬರ್ ಪೊಲೀಸ್ ಠಾಣೆಗೆ ವಕೀಲ ಸಿ.ಲಕ್ಷ್ಮೀನಾರಾಯಣ ಎಂಬುವರು ದೂರು ನೀಡಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಈ ದೂರಿನ ಬಗ್ಗೆಯೂ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ ಪ್ರತಿಕ್ರಿಯಿಸಿರುವಂತ ಪ್ರಶಾಂತ್ ಸಂಬರಗಿ ಅವರು, ದುರಾದೃಷ್ಠಕರ ಸಂಗತಿ ನೋಡಿ.. ಕಾಂಗ್ರೆಸ್ ಗುಲಾಮರೊಬ್ಬರು ನನ್ನ ವಿರುದ್ಧ ದೂರು ದಾಖಲಿಸಿದ ಪರಿಣಾಮ, ಎಫ್‌ಐಆರ್ ದಾಖಲಿಸಲಾಗಿದೆ. ಇದು ನಾನು ಡಿಕೆ ಶಿವಕುಮಾರ್ ವಿರುದ್ಧ ಧ್ವನಿ ಎತ್ತಿದ ಕಾರಣದಿಂದ ಆಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬ್ಯಾಟಿಂಗ್ ಮಾಡುವ ವೇಳೆ, ಹೀಗೆ ಪದೇ ಪದೇ ಗೊಣಗುತ್ತಿದ್ದ ಅಜಿಂಕ್ಯ ರಹಾನೆ: ಕಾರಣ ಏನ್ ಗೊತ್ತಾ?

Mon Dec 27 , 2021
ಸೆಂಚುರಿಯನ್ ಸೂಪರ್‌ಸ್ಪೋರ್ಟ್‌ ಪಾರ್ಕ್‌ನಲ್ಲಿ ಮೊದಲ ದಿನ ಉತ್ತಮ ಆರಂಭ ಪಡೆದಿರುವ ಟೀಂ ಇಂಡಿಯಾ, ಉತ್ತಮ ಮೊತ್ತ ಕಲೆಹಾಕುವ ಎಲ್ಲಾ ಮುನ್ಸೂಚನೆ ನೀಡಿದೆ. ಎರಡನೇ ದಿನದಾಟವು ಮಳೆಯಿಂದಾಗಿ ವಿಳಂಭವಾಗಿದ್ದರೂ, ಮೊದಲ ದಿನದಾಟದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳ ಪ್ರದರ್ಶನ ಟೆಸ್ಟ್ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ಬಡಿಸಿದೆ. ಕೆ.ಎಲ್ ರಾಹುಲ್‌ ಭರ್ಜರಿ ಶತಕದ ಜೊತೆಗೆ ಮಯಾಂಕ್ ಅಗರ್ವಾಲ್ ಅರ್ಧಶತಕದ ಕೊಡುಗೆ ತಂಡದ ಮೊತ್ತ ಹೆಚ್ಚಿಸುವಲ್ಲಿ ಕಾರಣವಾಗಿದೆ. ಕೊಹ್ಲಿ ಇನ್ನಿಂಗ್ಸ್ 35 ರನ್‌ಗೆ ಮುಕ್ತಾಯಗೊಂಡ್ರೆ, ಚೇತೇಶ್ವರ […]

Advertisement

Wordpress Social Share Plugin powered by Ultimatelysocial