ವಿಶಿಷ್ಟ ಹಾಗು ವಿಭಿನ್ನವಾಗಿದೆ “ಕಾಣೆಯಾದವರ ಬಗ್ಗೆ ಪ್ರಕಟಣೆ” ಚಿತ್ರದ ಟ್ರೇಲರ್.

ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದ ದುನಿಯಾ ವಿಜಯ್ ಹಾಗೂ ಡಾಲಿ ಧನಂಜಯ.

ಕನ್ನಡಿಗರು ಉತ್ತಮಕಥೆಯುಳ್ಳ ಚಿತ್ರಗಳನ್ನು ಮೆಚ್ಚಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ಅಂತಹದೊಂದು ವಿಶಿಷ್ಟ ಹಾಗೂ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ “ಕಾಣೆಯಾದವರ ಬಗ್ಗೆ ಪ್ರಕಟಣೆ”.

ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ದುನಿಯಾ ‌ವಿಜಯ್ ಹಾಗೂ‌ ಡಾಲಿ ಧನಂಜಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.

ರಂಗಾಯಣ ರಘು, ರವಿಶಂಕರ್ ಹಾಗೂ ತಬಲನಾಣಿ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ.

ಮುಸುಕು ಧರಿಸಿದ ಮೂರು ಪ್ರಮುಖ ಪಾತ್ರಧಾರಿಗಳನ್ನು, ಪೊಲೀಸ್ ಪಾತ್ರಧಾರಿ ವೇದಿಕೆಗೆ ಕರೆತರುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಲಾಯಿತು.

ನಾನು ಹಾಗೂ ನಿರ್ದೇಶಕ ಅನಿಲ್ ಹಲವು ವರ್ಷಗಳ ಸ್ನೇಹಿತರು. ಆಗ ನಾವು ಕಳೆದ ದಿನಗಳು ಸುಂದರ. ಆಗಿನಿಂದ ಅನಿಲ್ ಗೆ ಬರವಣಿಗೆಯಲ್ಲಿ ಆಸಕ್ತಿ. ಮುಂದೆ ಆತನ ಸಂಭಾಷಣೆಯಲ್ಲಿ ಉತ್ತಮ ಚಿತ್ರಗಳು ಬಂದಿದೆ. ನಿರ್ದೇಶಕನಾಗೂ ಆತ ಚಿರಪರಿಚಿತ ಈಗ ತೀರ ಅಪರೂಪವೆಂಬ ಕಥಾವಸ್ತು ಆಯ್ಕೆಮಾಡಿಕೊಂಡು ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ರಂಗಾಯಣ ರಘು, ರವಿಶಂಕರ್, ತಬಲನಾಣಿ ಹಾಗೂ ಚಿಕ್ಕಣ್ಣ ಅವರಂತಹ ಉತ್ತಮ ಕಲಾವಿದರ ಅಭಿನಯದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಒಳ್ಳೆಯದಾಗಲಿ. ನಾನು ಸಹ ಮೊದಲ ದಿನ ಈ ಚಿತ್ರ ನೋಡುತ್ತೇನೆ ಎಂದರು ದುನಿಯಾ ವಿಜಯ್.

ಒಬ್ಬ‌ ನಾಯಕ ಎರಡೂವರೆ ಗಂಟೆಗಳ ಕಾಲ ಒಬ್ಬನೇ ತೆರೆಯ ಮೆಲೆ ಕಾಣಲು ಸಾಧ್ಯವಿಲ್ಲ. ನಾಯಕನಿಗೆ ಇಲ್ಲಿರುವ ಅದ್ಭುತ ಕಲಾವಿದರ ಸಹಕಾರಬೇಕು. ನಮ್ಮ ಚಿತ್ರದಲ್ಲಿ ರಘು ಅಣ್ಣ ಮಾಡಿರುವ ಪಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇಂತಹ ಕಲಾವಿದರ ಸಂಗಮದಲ್ಲಿ ಮೂಡಿಬಂದಿರುವ ಈ ಚಿತ್ರ ನೋಡಲು ನಾನು ಕಾತುರಾನಾಗಿದ್ದೀನಿ ಎಂದರು ಡಾಲಿ ಧನಂಜಯ.

ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದುನಿಯಾ ವಿಜಯ್ ಹಾಗೂ ಡಾಲಿ ಅವರಿಗೆ ಧನ್ಯವಾದ. ವಿಜಯ್ ಅವರೊಂದಿಗೆ ಕಳೆದ ಆ ದಿನಗಳನ್ನು ಮರೆಯಲು ಸಾಧ್ಯವಿಲ್ಲ. ಆಗಿನಿಂದಲೂ ತನ್ನ ಹತ್ತಿರದವರನ್ನು ಬೆಳೆಸುವ ಗುಣ ವಿಜಿ ಅವರದು. ಇನ್ನೂ ಚಿತ್ರದ ಬಗ್ಗೆ ಹೇಳುವುದಾದರೆ ಇದೊಂದು ವಿಭಿನ್ನ ಕಥಾವಸ್ತು.
ರಂಗಾಯಣ ರಘು, ರವಿಶಂಕರ್, ತಬಲ ನಾಣಿ, ಚಿಕ್ಕಣ್ಣ, ತಿಲಕ್, ಆಶಿಕಾ ರಂಗನಾಥ್ ಮುಂತಾದ ಕಲಾವಿದರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ನನ್ನ ಅಣ್ಣ ಜಿತೇಂದ್ರ ಮಂಜುನಾಥ್ ನಮ್ಮ ಚಿತ್ರಕ್ಕೆ ಹಣ ಹೂಡಿದ್ದಾರೆ. ಈ ಚಿತ್ರಕ್ಕೆ ನನ್ನ ಸ್ನೇಹಿತರ ಸಹಕಾರ ಅಪಾರ. ಈಗ ಟ್ರೇಲರ್ ಬಿಡುಗಡೆ ಮಾಡಿದ್ದೇವೆ. ಮೇನಲ್ಲಿ ಚಿತ್ರ ತೆರೆಗೆ ತರುತ್ತೇವೆ ಎಂದರು ನಿರ್ದೇಶಕ ಅನಿಲ್ ಕುಮಾರ್.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿದ್ದು ಎದ್ದು ಗೆದ್ದ ಕಿರೀಟಿ...ಬಳ್ಳಾರಿ ಕುವರ ಇಂಟ್ರೂಡಕ್ಷನ್ ಟೀಸರ್ ಹಿಂದಿನ ಪರಿಶ್ರಮ ಅನಾವರಣ!

Wed Apr 20 , 2022
      ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ಕಿರೀಟಿ ನಟನೆಯ ಮೊದಲ ಸಿನಿಮಾದ ಇಂಟ್ರೂಡಕ್ಷನ್ ಟೀಸರ್ ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸ್ತಿದೆ. ಕಿರೀಟಿ ಸ್ಟಂಟ್ಸ್, ಡ್ಯಾನ್ಸ್, ಆಕ್ಷನ್ ಸೀನ್ಸ್ ಕಂಡು ಚಿತ್ರರಸಿಕರು ಹುಬ್ಬೇರಿಸಿದ್ದರು. ಸ್ವತಃ ಚಿತ್ರಬ್ರಹ್ಮ ರಾಜಮೌಳಿಯೇ ಕಿರೀಟಿ ಆಕ್ಟಿಂಗ್ , ಸ್ಟಂಟ್ಸ್ ಗೆ ಬಹುಪರಾಕ್ ಅಂತಾ ಬೆನ್ನುತಟ್ಟಿದ್ದರು. ಇಷ್ಟೆಲ್ಲಾ ಮೆಚ್ಚುಗೆ ಪಡೆದಿರುವ ಕಿರೀಟಿ ಸಾಹಸದ ಹಿಂದೆ ನೋವು, ಕಷ್ಟದ ಪರಿಶ್ರಮ ಅಡಗಿದೆ.ಟೀಸರ್ ಹಿಂದಿನ ಪರಿಶ್ರಮದ ತುಣುಕು […]

Advertisement

Wordpress Social Share Plugin powered by Ultimatelysocial